Categories: Main News

ನಾಲ್ಕು ತಂಡಗಳ ಕೆಲ ಆಟಗಾರರಿಗೆ ಕೊರೋನಾ ಪಾಸಿಟಿವ್ : ಐಪಿಎಲ್ ಪಂದ್ಯಕ್ಕೆ ಕರಿನೆರಳು

ಏಪ್ರಿಲ್ 9 ರಿಂದ ಆರಂಭವಾಗಲಿರುವ ಇಂಡಿಯನ್​ ಪ್ರೀಮಿಯರ್​ ಲೀಗ್​​​ ಪಂದ್ಯಕ್ಕೆ ಕೊರೊನಾ ಕರಿ ನೆರಳು ಬಿದ್ದಿದೆ.

ಚೆನ್ನೈಸೂಪರ್ ಕಿಂಗ್ಸ್, ಕೆಕೆಆರ್, ಡೆಲ್ಲಿ ಕ್ಯಾಪಿಟಲ್ಸ್ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರನಿಗೂ ಕೊರೊನಾ ವಕ್ಕರಿಸಿದೆ.

ಆರ್‌ಸಿಬಿ ತಂಡದ ಓಪನಿಂಗ್​ ಬ್ಯಾಟ್ಸ್‌ಮನ್ ದೇವದತ್ ಪಡಿಕ್ಕಲ್​ಗೆ ಕೋವಿಡ್ ಪಾಸಿಟಿವ್ ಕಂಡುಬಂದಿದೆ. ಈ ಮೂಲಕ ಐಪಿಎಲ್​ನ ಮೂರನೇ ಆಟಗಾರನಿಗೆ ಪಾಸಿಟಿವ್​ ಬಂದಂತಾಗಿದೆ. ಪಡಿಕ್ಕಲ್​ರ ಸಂಪರ್ಕ ಹೊಂದಿದ್ದ ಆಟಗಾರರು ಮತ್ತು ಸಿಬ್ಬಂದಿಯನ್ನು ಕ್ವಾರಂಟೀನ್​ಗೆ ಒಳಪಡಿಸಲಾಗಿದೆ.

ಪಡಿಕ್ಕಲ್​ಗೆ ಕೋವಿಡ್​-19 ಬಂದಿರುವ ಕಾರಣ, ವಿರಾಟ್​ ಕೊಹ್ಲಿ ಪಡೆಗೆ ಆಘಾತ ಎದುರಾಗಿದೆ. ಪಡಿಕ್ಕಲ್​ ಚಿಕಿತ್ಸೆ ಪಡೆದು ಚೇತರಿಸಿಕೊಂಡ ಬಳಿಕ ಕ್ವಾರಂಟೀನ್​​ಗೆ ಒಳಪಡಲಿದ್ದು, ಆರಂಭದ ಕೆಲ ಪಂದ್ಯಗಳಿಗೆ ಅವರು ಅಲಭ್ಯರಾಗಲಿದ್ದಾರೆ ಎನ್ನಲಾಗಿದೆ.

ಏ.9ರಂದು ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಆರ್​​ಸಿಬಿ ಎದುರಿಸಲಿದೆ. ಏಪ್ರಿಲ್​ 3 (ನಿನ್ನೆ) ಡೆಲ್ಲಿ ಕ್ಯಾಪಿಟಲ್ಸ್​ ತಂಡ ಆಲ್​ರೌಂಡರ್​ ಅಕ್ಷರ್​ ಪಟೇಲ್​, ಕೆಕೆಆರ್​​ನ ನಿತಿಶ್​ ರಾಣಾ ಮತ್ತು ವಾಂಖೆಡೆ ಸ್ಟೇಡಿಯಂನ 10 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಇತ್ತ ಸಿಎಸ್​ಕೆ ಕ್ಯಾಂಪ್​​ನಲ್ಲೂ ಸಿಬ್ಬಂದಿಗೆ ಮಹಾಮಾರಿ ವಕ್ಕರಿಸಿದೆ.

Team Newsnap
Leave a Comment
Share
Published by
Team Newsnap

Recent Posts

ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿ : ಸಿ.ಎಂ.ಸಿದ್ದರಾಮಯ್ಯ

ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More

September 21, 2024

10 ವರ್ಷದ ಬಾಲಕ ಹೃದಯಘಾತದಿಂದ ಸಾವು

ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್‌… Read More

September 21, 2024

ಮೈಸೂರು ದಸರಾ ಆನೆಗಳ ನಡುವೆ ಗುದ್ದಾಟ ಆತಂಕದಲ್ಲಿ ದಿಕ್ಕಾಪಾಲಾದ ಜನರು

ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More

September 21, 2024

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024