ಪೇ ಸಿಎಂ ಅಭಿಯಾನದ ಭಾಗವಾಗಿ ಬೆಂಗಳೂರಿನ ಹಲವು ಕಡೆ ಪೇ ಸಿಎಂ ಪೋಸ್ಟರ್ ಅಂಟಿಸಿದ್ದ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಪದಾಧಿಕಾರಿಗಳಿಗೆ ಪ್ರಕರಣ ಸಂಬಂಧ ವಿಚಾರಣೆಗಾಗಿ ಅ 1ರಂದು ಹಾಜರಾಗುವಂತೆ ಬೆಂಗಳೂರಿನ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
‘ಪೇ ಸಿಎಂ ಪೋಸ್ಟರ್ ಪ್ರಕರಣ’ ವನ್ನು ಸಿಸಿಬಿಗೆ ವರ್ಗಾಯಿಸಿ ಬೆಂಗಳೂರು ನಗರ ಕಮೀಷನರ್ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ ನಂತರ ಈ ಕ್ರಮ ಜರುಗಿಸಲಾಗಿದೆ. ದಸರಾ ಹಬ್ಬದ ಆಚರಣೆಯ ಮಹತ್ವ
40% ಕಮಿಷನ್ ಆರೋಪ ಮುಂದಿಟ್ಟುಕೊಂಡು ಪೇ ಸಿಎಂ ಎಂದು ಪೇಟಿಎಂ ಮಾದರಿಯಲ್ಲಿ ರಚಿಸಲಾಗಿರುವ ಪೋಸ್ಟರ್ ನಗರದ ಹಲವು ಕಡೆಗಳಲ್ಲಿ ಹಾಕಲಾಗಿತ್ತು. ಹಾಗೂ ಈ ಸಂಬಂಧ ಹಲವರನ್ನು ಕೂಡ ಬಂಧಿಸಲಾಗಿತ್ತು.
ಪೇ ಸಿಎಂ ಪೋಸ್ಟರ್ ಅಂಟಿಸಿದ್ದ ಸ್ಥಳಗಳಲ್ಲಿನ ಸಿಸಿಟಿವಿ ದೃಶ್ಯಗಳನ್ನು ಕಲೆಹಾಕಿ ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಬಿ ಆರ್ ನಾಯ್ಡು, ಸಂಜಯ್, ಗಗನ್, ಪವನ್, ವಿಶ್ವನಾಥ್ ಸೇರಿ ಹಲವರಿಗೆ ಅ. 1 ರಂದು ಸಿಸಿಬಿ ಕಚೇರಿಯಲ್ಲಿ ಹಾಜರಾಗುವಂತೆ ಸೂಚಿಸಿ ನೋಟಿಸ್ ಜಾರಿ ಮಾಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು