ಪಿಎಸ್ಐ ನೇಮಕಾತಿ ಹಗರಣದಲ್ಲಿ ಮಾಜಿ ಎಡಿಜಿಪಿ ಅಮೃತ್ ಪೌಲ್ ಅತಿಯಾದ ಒಂಟಿತನದಿಂದ ಡಿಪ್ರೆಶನ್ಗೆ ಹೋಗಿರುವ ಅಮೃತ್ ಪೌಲ್ಗೆ ಜೈಲಾಧಿಕಾರಿಗಳು ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ.
ಸ್ವಚ್ಛಂದವಾಗಿ ಹಾರಾಡಿಕೊಂಡಿದ್ದ ಹಿರಿಯ ಅಧಿಕಾರಿ ಜೈಲು ಸೇರಿದ ನಂತರ ಮಾನಸಿಕವಾಗಿ ಹಿಂಸೆ ಅನುಭವಿಸುತ್ತಿದ್ದಾರೆ.
ಅದೆಷ್ಟೋ ಆರೋಪಿಗಳ ಜೈಲಿಗೆ ಕಳುಹಿಸಿದ್ದ ಅಮೃತ್ ಪೌಲ್ ಅದೇ ಆರೋಪಿಗಳ ಜೊತೆ ಕಾಲ ಕಳೆಯುವಂತೆ ಆಗಿದೆ. ಆರೋಪಿಗಳ ಜೊತೆ ಬೆರೆಯುವುದಕ್ಕೂ ಆಗದೆ ಒಂಟಿತನ ಅನುಭವಿಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಡಿಪ್ರೆಶನ್ಗೆ ಹೋಗಿದ್ದಾರೆ.ಅಮೃತ್ ಪೌಲ್ ಬಂಧನವಾಗುವ ಮುಂಚೆಯಿಂದಲೂ ಡಿಪ್ರೆಶನ್ಗೆ ಚಿಕಿತ್ಸೆ ಪಡೆಯುತ್ತಿದ್ದರು.
ಆದರೆ, ಮಾಡಿದ ಕೆಲಸದಿಂದ ಜೈಲು ಸೇರಿ ಅವರಿಗಿದ್ದ ಸಮಸ್ಯೆ ಉಲ್ಬಣವಾಗಿದೆ. ಅದಕ್ಕಾಗಿ ಮನೋವೈದ್ಯರ ಬಳಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.
545 ಪಿಎಸ್ಐ ಹುದ್ದೆಗಳ ಡೀಲ್ ನಡೆದಾಗ ಅಮೃತ್ ಪೌಲ್ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದರು. ಡಿವೈಎಸ್ಪಿ ಹಾಗೂ ಎಫ್ಡಿಎಯೊಂದಿಗೆ ಸೇರಿ ಅಮೃತ್ ಪೌಲ್ ಡೀಲ್ ಮಾಡಿಸಿದ್ದಾರೆ ಎಂಬ ಆರೋಪವಿದೆ. ಬಂಧನಕ್ಕೆ ಒಳಗಾದ ಆರೋಪಿಗಳ ವಿಚಾರಣೆ ವೇಳೆ ಕೆಲವರು ಅಮೃತ್ ಪೌಲ್ ಹೆಸರನ್ನು ಬಾಯಿಬಿಟ್ಟಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅಮೃತ್ ಪೌಲ್ ಅವರನ್ನು ಬಂಧಿಸಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು