ಸಿಡಿ ಯುವತಿಯ ತನಿಖೆಯ ನಂತರ ಎಸ್ ಐಟಿಗೆ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದೆ.
ಮಾಜಿ ಸಚಿವ ಡಿ. ಸುಧಾಕರ್ ಸಿಡಿ ಯುವತಿ ಜತೆ ಅತಿ ಹೆಚ್ಚು ಬಾರಿ ಫೋನ್ನಲ್ಲಿ ಮಾತನಾಡಿರುವುದು ಎಸ್ಐಟಿ ತನಿಖೆ ವೇಳೆ ಬೆಳಕಿಗೆ ಬಂದಿದೆ
ಚಿತ್ರದುರ್ಗ ಮೂಲದ ಡಿ. ಸುಧಾಕರ್ ಈ ಹಿಂದೆ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು. ಸಿಡಿ ಬಿಡುಗಡೆಗೂ ಎರಡು ದಿನ ಮುನ್ನ ಸಿಡಿ ಪ್ರಕರಣದಲ್ಲಿ ಇದ್ದಾಳೆ ಎನ್ನುವ ಯುವತಿ ಬಳಿ ಡಿ.ಸುಧಾಕರ್ ಹಣದ ವ್ಯವಹಾರ ನಡೆಸಿರುವ ಬಗ್ಗೆ ತನಿಖೆ ವೇಳೆ ಸುಳಿವು ದೊರೆತಿದೆ ಎಂದು ಹೇಳಲಾಗುತ್ತಿದೆ.
ಈ ಕುರಿತು ಮಾಜಿ ಸಚಿವ ಡಿ.ಸುಧಾಕರ್ಗೆ ನೋಟಿಸ್ ನೀಡಿ ಹೆಚ್ಚಿನ ಮಾಹಿತಿ ಪಡೆಯಬಹುದು ಎಂದು ಮೂಲಗಳು ತಿಳಿಸಿವೆ.
ಡಿ. ಸುಧಾಕರ್ ಯಾರು ?
2004ರಲ್ಲಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಅವರು, 2008 ಮತ್ತು 2013ರಲ್ಲಿ ಹಿರಿಯೂರು ಕ್ಷೇತ್ರದಲ್ಲಿ ಸ್ಪರ್ಧಿಸಿ ಅಲ್ಲೂ ಗೆದ್ದಿದ್ದರು. ಸಿಎಂ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸಮಾಜ ಕಲ್ಯಾಣ ಸಚಿವರಾಗಿ ಅವರು ಕಾರ್ಯನಿರ್ವಹಿಸಿದ್ದರು. ಸದ್ಯ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ.
ಲಾಕ್ಡೌನ್ ಸಮಯದಲ್ಲಿಯೂ ಮಾಜಿ ಸಚಿವ ಡಿ.ಸುಧಾಕರ್ ಸಿಡಿ ಸಂತ್ರಸ್ತೆಯ ಜತೆ ಕರೆ ಮಾಡಿ ಮಾತನಾಡಿದ್ದರು ಎಂಬುದು ಗೊತ್ತಾಗಿದೆ.
ನನಗೆ ಯಾವುದೇ ಸಂಬಂಧ ಇಲ್ಲ ಡಿ.ಸುಧಾಕರ್ :
ಸಿಡಿ ಸಂತ್ರಸ್ತೆ ಜತೆ ನಂಟು ಹೊಂದಿದ್ದಾರೆ ಎಂಬ ಶಂಕೆ ವ್ಯಕ್ತವಾದ ಬೆನ್ನಲ್ಲೇ ಮಾಧ್ಯಮ ಗಳಿಗೆ ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ ಡಿ.ಸುಧಾಕರ್ ‘ನನಗೂ ಸಿಡಿ ಸಂತ್ರಸ್ತೆ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ.ಇದನ್ನು ನೋಡಿ ನನಗೆ ಆಶ್ಚರ್ಯ ಆಗಿದೆ. ನಾನು ಯಾವುದೇ ಹಣದ ವ್ಯವಹಾರ ಮಾಡಿಲ್ಲ. ನನಗೆ ದಿನನಿತ್ಯ ನೂರಾರು ಜನರು ಕರೆ ಮಾಡುತ್ತಾರೆನಾನು ಹಣ ವರ್ಗಾಯಿಸಿದ್ದಕ್ಕೆ ಸಾಕ್ಷಿ ಇದೆಯಾ? ಯುವತಿ ಕಾಲ್ ಲಿಸ್ಟ್ನಲ್ಲಿ ನನ್ನ ಹೆಸರು ಇರಬಹುದು. ಆದರೆ ನಾನು ಹಣ ನೀಡಿದ್ದೇನೆ ಅನ್ನುವುದು ಸುಳ್ಳು. ನೋಟಿಸ್ ಬಂದ ಬಳಿಕ ನಾನು ಉತ್ತರ ಕೊಡುತ್ತೇನೆ. ನನ್ನದು ಏನಿದೆ ಎಂದು ನೋಟಿಸ್ ಕೊಡುತ್ತಾರೆ. ನೋಟಿಸ್ ಕೊಟ್ಟರೆ ನಾನು ವಿಚಾರಣೆಗೆ ಹೋಗುತ್ತೇನೆ ಎಂದು ಮಾಜಿ ಸಚಿವ ಡಿ.ಸುಧಾಕರ್ ಹೇಳಿದ್ದಾರೆ.
ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More
ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್… Read More
ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
This website uses cookies.
Leave a Comment