ಮಾಜಿ ಸಿಎಂ ಹೆಚ್​ಡಿ ಕೆ ಬೆಂಗಾವಲು ವಾಹನ ಅಪಘಾತ- ಮೂವರಿಗೆ ಗಾಯ

Team Newsnap
1 Min Read

ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಬೆಂಗಾವಲು ವಾಹನ ಅಪಘಾತಕ್ಕೀಡಾಗಿ ಮೂವರು ಗಂಭೀರವಾಗಿ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ತಿಪ್ಪೂರು ಗೇಟ್ ಬಳಿ ನಡೆದಿದೆ.

ಕಳೆದ ತಡ ರಾತ್ರಿ ನಡೆದ ಮಂಗಳೂರಿನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಸಂದರ್ಭದಲ್ಲಿ ರಾತ್ರಿ ಸುಮಾರು 1 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿದೆ.

ಅಪಘಾತದ ಸಂದರ್ಭದಲ್ಲಿ ವಾಹನದಲ್ಲಿದ್ದ ಐವರಲ್ಲಿ ಮೂವರು ಗಾಯಗೊಂಡಿದ್ದಾರೆ , ಗಾಯಾಳುಗಳಿಗೆ ಆದಿಚುಂಚನಗಿರಿ BGS ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಪೊಲೀಸ್ ಸಿಬ್ಬಂದಿಗಳಾದ ಮಹೇಶ್ , ಮಂಜುನಾಥ್, ಆನಂದ್, ಹರೀಶ್ ಅವರಿಗೆ ಸಣ್ಣ ಪ್ರಮಾಣದ ಗಾಯಗಳಾಗಿದೆ. ಸ್ಥಳಕ್ಕೆ ಅಮೃತ್ತೂರು ಪೊಲೀಸರು ಭೇಟಿ‌ ಪರಿಶೀಲನೆ ನಡೆಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

Share This Article
Leave a comment