ನಾಡಹಬ್ಬ ಮೈಸೂರು ದಸರಾ ಹಿನ್ನೆಲೆಯಲ್ಲಿ ಭಾನುವಾರ ಮಾಜಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ಚಾಮುಂಡಿ ತಾಯಿಯ ದರ್ಶನ ಪಡೆದರು.
ಅರ್ಧ ಗಂಟೆಗೂ ಹೆಚ್ಚು ಕಾಲ ದೇವಾಲಯದಲ್ಲಿ ಪ್ರಾರ್ಥನೆ ಮಾಡಿ ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು.ಜೀವ ಮೋಹಕಿಂತ ವಸ್ತು ಮೋಹವೇ? (ಬ್ಯಾಂಕರ್ಸ್ ಡೈರಿ)
ಚಾಮುಂಡಿ ತಾಯಿಯ ಪರಮ ಭಕ್ತೆಯಾಗಿರುವ ಪಾರ್ವತಿಯವರು ಪ್ರತಿ ವರ್ಷ ನವರಾತ್ರಿಯ ಒಂಬತ್ತು ದಿನಗಳ ಕಾಲ ತಾಯಿಯ ದರ್ಶನ ಪಡೆಯುತ್ತಾರೆ.
ನಾಡಹಬ್ಬ ದಸರಾಗೆ ಕ್ಷಣಗಣನೆ ಶುರುವಾಗಿದೆ. ಚಿನ್ನದ ಅಂಬಾರಿಯಲ್ಲಿ ಕೂರುವ ತಾಯಿ ಚಾಮುಂಡಿಯ ಉತ್ಸವ ಮೂರ್ತಿ ನೋಡಲು ಕೋಟ್ಯಂತರ ಜನ ಕಾಯುತ್ತಿದ್ದಾರೆ.
ದಸರಾದ ಪ್ರಮುಖ ಆಕರ್ಷಣೆಯಾದ ಚಾಮುಂಡಿ ತಾಯಿಯ ಉತ್ಸವ ಮೂರ್ತಿಯ ಸ್ವಚ್ಛತಾ ಕಾರ್ಯ ಚಾಮುಂಡಿ ಬೆಟ್ಟದಲ್ಲಿ ಶುರುವಾಗಿದೆ.
ದಸರಾ ಮುಗಿದ ಮೇಲೆ ಈ ಉತ್ಸವ ಮೂರ್ತಿ ಅರಮನೆ ಮಂಡಳಿಯ ಖಜಾನೆಯಲ್ಲಿ ಇರುತ್ತದೆ. ದಸರೆಗೆ ಎರಡು ದಿನ ಮುಂಚಿತವಾಗಿ ಚಾಮುಂಡಿ ಬೆಟ್ಟಕ್ಕೆ ಉತ್ಸವ ಮೂರ್ತಿ ತಂದು ಸ್ವಚ್ಛತಾ ಕಾರ್ಯ ನೆರವೇರಿಸಿ ಪೂಜೆ ಆರಂಭಿಸಲಾಗುತ್ತದೆ.
ನವರಾತ್ರಿಯ 9 ದಿನವೂ ಈ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ ಮೂರ್ತಿಗೆ ಶಕ್ತಿ ತುಂಬಲಾಗುತ್ತದೆ.
- ಜುಲೈ ವೇಳೆಗೆ ಧಾರವಾಡ – ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭ – ಜೋಶಿ
- ನಮ್ಮ ಮೆಟ್ರೋ ಲಿಖಿತ ಪರೀಕ್ಷೆ ಮುಂದೂಡಿಕೆ
- ನನ್ನ ವಿರುದ್ಧದ ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುವೆ : ಬ್ರಿಜ್ ಭೂಷಣ್
- ಲೋಕಸಭೆ ಚುನಾವಣೆ ಸ್ಪರ್ಧೆ ಕುರಿತು ಯಾವುದೇ ಚರ್ಚೆ ಇಲ್ಲ : ಜಗದೀಶ್ ಶೆಟ್ಟರ್
- ಲೋಕಾಯುಕ್ತ ದಾಳಿ- ಜಿಂಕೆ ಕೊಂಬು ಸೇರಿ 4.75 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ
- ಜೆಡಿಎಸ್ ವಿಸರ್ಜನೆ ಪ್ರಶ್ನೆಗೆ ಎಚ್ಡಿಕೆ ಕಡಕ್ ಉತ್ತರ
More Stories
ಜುಲೈ ವೇಳೆಗೆ ಧಾರವಾಡ – ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭ – ಜೋಶಿ
ನಮ್ಮ ಮೆಟ್ರೋ ಲಿಖಿತ ಪರೀಕ್ಷೆ ಮುಂದೂಡಿಕೆ
ಲೋಕಾಯುಕ್ತ ದಾಳಿ- ಜಿಂಕೆ ಕೊಂಬು ಸೇರಿ 4.75 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ