Main News

ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಫೋಕ್ಸೋ ಕಾಯ್ದೆ ಅಡಿ FIR

ಬೆಂಗಳೂರು : ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೋಲಿಸ್ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿದೆ.

ಕಳೆದ ಫೆಬ್ರವರಿ 2 ರಂದು ತಮ್ಮ ಮಗಳು ಅಪ್ರಾಪ್ತೆಯ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಿರುವ ಹಿನ್ನೆಲೆಯಲ್ಲಿ ಫೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ 354 (A) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಫೆಬ್ರವರಿ 2 ರಂದು ಸಹಾಯ ಕೇಳಲು ಹೋಗಿದ್ದಾಗ ತನಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಸಂತ್ರಸ್ತೆಯು ಎಫ್ಐಆರ್ ನಲ್ಲಿ ಉಲ್ಲೇಖಿಸಿದ್ದಾಳೆ ಎಂದು ತಿಳಿದುಬಂದಿದೆ. ಪೆಟ್ರೋಲ್, ಡೀಸೆಲ್ ಪ್ರತಿ ಲೀಟರ್ ಗೆ 2 ರೂ ಇಳಿಕೆ | Petrol Price Reduced

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಬಿಜೆಪಿಯು ಬಿರುಸಿನ ಚಟುವಟಿಕೆಗಳನ್ನು ನಡೆಸುತ್ತಿದೆ. ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಓಡಾಟ ನಡೆಸುತ್ತಿರುವ ಯಡಿಯೂರಪ್ಪ ಅವರು ಚುನಾವಣಾ ಪ್ರಚಾರಕ್ಕೆ ಅಣಿಯಾಗುತ್ತಿದ್ದಾರೆ. ಈ ನಡುವೆ ಪೋಕ್ಸೋ ಪ್ರಕರಣ ದಾಖಲಾಗಿರುವುದು ಯಡಿಯೂರಪ್ಪ ಅವರು ಸಂಕಷ್ಟಕ್ಕೆ ಸಿಲುಕಿಸಿದಂತಾಗಿದೆ. ಬಂಧನದ ಭೀತಿಯೂ ಎದುರಾಗಿದೆ.

53 ಮಂದಿ ವಿರುದ್ಧ ದೂರು ನೀಡಿದ ಮಹಿಳೆ ಪ್ರಕರಣ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು , ಬಿಸಿನೆಸ್ ಮ್ಯಾನ್‌ಗಳು ಸೇರಿದಂತೆ ಒಟ್ಟು 53 ಮಂದಿ ವಿರುದ್ದವೇ ಸಂತ್ರಸ್ತ ಬಾಲಕಿಯ ತಾಯಿ ಸದಾಶಿವನಗರ ಠಾಣೆಗೆ ದೂರು ನೀಡಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧಫೋಕ್ಸೋ ಕಾಯ್ದೆ ಅಡಿ FIR – former CM Yeddyurappa FIR under pocso Act #pocso #bjp #inc #india #bengaluru

Team Newsnap
Leave a Comment

Recent Posts

ಕರ್ನೂಲಿನಲ್ಲಿ ಭೀಕರ ರಸ್ತೆ ಅಪಘಾತ: ಮಂಡ್ಯದ ನಟಿ `ಪವಿತ್ರ ಜಯರಾಂ’ ಸಾವು

ಬೆಂಗಳೂರು : ತೆಲುಗಿನ 'ತ್ರಿನಯನಿ' ಧಾರಾವಾಹಿಯಲ್ಲಿ ಜನಪ್ರಿಯರಾಗಿರುವ ಕನ್ನಡತಿ, ಮಂಡ್ಯದ ಹನಕೆರೆ ಪವಿತ್ರ ಜಯರಾಂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಕರ್ನೂಲು… Read More

May 12, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 12 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 67,000 ರೂಪಾಯಿ ದಾಖಲಾಗಿದೆ. 24… Read More

May 12, 2024

ಪ್ರಜ್ವಲ್ ಪ್ರಕರಣ : ಸಿಬಿಐಗೆ ವಹಿಸಲ್ಲ – ಸಿಎಂ ಸಿದ್ದು

ನಮ್ಮ ಪೋಲಿಸರು ಸಮರ್ಥರಿದ್ದಾರೆ ⁠ಬಿಜೆಪಿಯವರು ಯಾವತ್ತಾದರೂ ಸಿಬಿಐ ತನಿಖೆ ಕೊಟ್ಟಿದ್ದಾರಾ ? ಬೆಂಗಳೂರು : ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ… Read More

May 10, 2024

ಕೊಡಗು: ಬಾಲಕಿಯನ್ನು ಭೀಕರ ಹತ್ಯೆಗೈದ ಆರೋಪಿ ಆತ್ಮಹತ್ಯೆ

ಮಡಿಕೇರಿ : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್​ಎಸ್​ಎಲ್​ಸಿ ಬಾಲಕಿಯನ್ನು ಭೀಕರವಾಗಿ ಹತ್ಯೆ ಮಾಡಿ ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ… Read More

May 10, 2024

ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ

ಮುಂಬೈ: ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರವನ್ನು ಶುದ್ಧೀಕರಿಸುತ್ತೇವೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ… Read More

May 10, 2024

ಕ್ರೇಜಿವಾಲ್ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ ಸುಪ್ರೀಂ

ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೂನ್ 1 ರ ವರೆಗೂ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು… Read More

May 10, 2024