Karnataka

ಪ್ರತಿಭಟನೆಗೆ ಇಳಿದ ಮಾಜಿ ಸಿಎಂ ಪುತ್ರ ನಿಖಿಲ್‌ ಕುಮಾರಸ್ವಾಮಿ ಪೋಲಿಸರ ವಶಕ್ಕೆ

ಟೋಲ್ ಸಂಗ್ರಹ ವಿರೋಧಿಸಿ ಪ್ರತಿಭಟನೆಗೆ ಇಳಿದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್‌ ಕುಮಾರಸ್ವಾಮಿ ಹಾಗೂ ಮಾಗಡಿ ಶಾಸಕ ಎ. ಮಂಜುನಾಥ್‌ ಅವರನ್ನು ರಾಮನಗರ ಪೊಲೀಸರು ವಶಕ್ಕೆ ಪಡೆದುಕೊಂಡರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ನಿರ್ಮಿಸಲಾದ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಕಳಪೆ ಕಾಮಗಾರಿ ಮಾಡಲಾಗಿದೆ. ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಇರುವ ಸರ್ವಿಸ್‌ ರಸ್ತೆಯನ್ನು ಸಮರ್ಪಕವಾಗಿ ಅಭಿವೃದ್ಧಿ ಮಾಡದಿದ್ದರೂ ಟೋಲ್‌ ಸಂಗ್ರಹಣೆ ಮಾಡುತ್ತಿರುವುದು ರಾಜ್ಯ ಸಾರ್ವಜನಿಕರಿಗೆ ಮಾಡುತ್ತಿರುವ ಅನ್ಯಾಯವಾಗಿದೆ ಎಂದು ರಾಮನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಕಣಿಮಿಣಿಕೆ ಟೋಲ್‌ ಬಳಿ ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಟೋಲ್‌ ಸಂಗ್ರಹಕ್ಕೆ ವಿರೋಧಿಸಿದ ಹಿನ್ನೆಲೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹೆದ್ದಾರಿ ಪ್ರಾಧಿಕಾರದ ಟೋಲ್‌ ಸಂಗ್ರಹದ ವಿರುದ್ಧ ದಿನೇ ದಿನೇ ಒಂದಲ್ಲ ಒಂದು ಪ್ರತಿಭಟನೆಗಳು ನಡೆಯುತ್ತಿವೆ. ಈಗ ಟೋಲ್‌ ಸಂಗ್ರಹ ವಿಚಾರದಲ್ಲಿ ರಾಜಕೀಯ ತಿರುವು ಪಡೆದುಕೊಂಡಿದೆ. ನಿನ್ನೆ ಕಾಂಗ್ರೆಸ್ ಪ್ರತಿಭಟನೆ ಬೆನ್ನಲ್ಲೇ, ಇಂದು ಜೆಡಿಎಸ್ ನಾಯಕ ನಿಖಿಲ್‌ ಕುಮಾರಸ್ವಾಮಿ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರಿಂದ ಪ್ರತಿಭಟನೆ ಮಾಡಲಾಗುತ್ತಿತ್ತು.

ಟೋಲ್‌ ಸಂಗ್ರಹಕ್ಕೆ ಅಡ್ಡಿ: ಹೆಜ್ಜಾಲ ಬಳಿಯ ಕಣಮಿಣಕಿ ಟೋಲ್ ಸಮೀಪ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ರಸ್ತೆಗೆ ಅಡ್ಡಬಂದು ಟೋಲ್‌ ಸಂಗ್ರಹ ಮಾಡದಂತೆ ತಡೆಯಲು ಮುಂದಾದ ನಿಖಿಲ್‌ ಕುಮಾರಸ್ವಾಮಿ ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಮತ್ತು ಟೋಲ್‌ ಸಂಗ್ರಹಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ.ಇದನ್ನು ಓದಿ –ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ಕಾರು ದರೋಡೆ : ಚಿನ್ನಾಭರಣ ದೋಚಿ ಪರಾರಿ

#NikhilKumarswamy #Ramnagar #arrested #NikhilArrested #protest #nationalHighway #BREAKINGNEWS #JDS

Team Newsnap
Leave a Comment

Recent Posts

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024