ವಿಧಾನ ಪರಿಷತ್ ನ ಮಾಜಿ ಸದಸ್ಯ ಇಂಡವಾಳು ಹೆಚ್ ಹೊನ್ನಪ್ಪ ವಿಧಿವಶರಾಗಿದ್ದಾರೆ.
ಇಂಡವಾಳು ಹೊನ್ನಯ್ಯನವರ ಪುತ್ರ ಹೊನ್ನಪ್ಪ ಅವರು ಸೂಕ್ಷ್ಮ ಮನಸ್ಸಿನ ವ್ಯಕ್ತಿತ್ವ ಹೊಂದಿ ಜನಪ್ರಿಯ ನಾಯಕರಾಗಿದ್ದರು. ಪಿಇಟಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೂಡ ಆಗಿ ಸೇವೆ ಸಲ್ಲಿಸಿದ್ದರು
ಎಸ್ ಡಿ ಜಯರಾಂ, ಎಂ ಎಸ್ ಆತ್ಮಾನಂದ ಮದ್ದೂರಿನ ಎಂ ಎಸ್ ಸಿದ್ದರಾಜು ಸೇರಿದಂತೆ ಅಪಾರ ಒಡನಾಡಿಗಳನ್ನು ಹೊಂದಿದ್ದರು.
ಜಿಲ್ಲಾ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷರಾಗಿದ್ದ ಇವರು ಮೈಷುಗರ್ ಅಧ್ಯಕ್ಷರೂ ಅಗಿದ್ದರು,ಅಂತ್ಯ ಕ್ರಿಯೆಯನ್ನು (ಫೆ. 15)ಬುಧವಾರ ಸಂಜೆ 4 ಗಂಟೆಗೆ ಇಂಡವಾಳು ಗ್ರಾಮದಲ್ಲಿ ನೆರವೇರಲಿದೆ.