ಚುನಾವಣೆ ಹೊತ್ತಲ್ಲೇ ಪಕ್ಷಾಂತರ ಪರ್ವ ಆರಂಭವಾದ ನಂತರ ಇಂದು ಮಾಜಿ ಸಂಸದ ಶಿವರಾಮೇಗೌಡ, ಪುತ್ರ ಚೇತನ್ ಗೌಡ ಸೇರಿದಂತೆ ಹಲವು ಪ್ರಮುಖ ಮುಖಂಡರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಮಾಜಿ ಸಂಸದ ಶಿವರಾಮೇಗೌಡ, ಪುತ್ರ ಚೇತನ್ ಗೌಡ, ಕಲಬುರಗಿ ವೈದ್ಯ ಯೋಗೇಶ್ ಬೆಸ್ತರ್, ರಾಮದುರ್ಗ ಟಿಕೆಟ್ ಆಕಾಂಕ್ಷಿಯಾಗಿದ್ದ ಚಿಕ್ಕರೇವಣ್ಣ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಸಚಿವರಾದ ಡಾ.ಕೆ. ಸುಧಾಕರ್, ಕೆ.ಗೋಪಾಲಯ್ಯ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು.
ಈ ಹಿಂದೆ ಶಿವರಾಮೇಗೌಡರು ಬಿಜೆಪಿಗೆ ಸೇರಿದ್ದರು. ಮತ್ತೆ ಎರಡನೇ ಬಾರಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.ಇದನ್ನು ಓದಿ –ನಟ ಸುದೀಪ್ ಖಾಸಗಿ ವಿಡಿಯೋ ಲೀಕ್ ಮಾಡುವ ಬೆದರಿಕೆ: ಕೇಸು ದಾಖಲು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಪೆನ್ ಡ್ರೈವ್ ಹೊಳೆಯಲ್ಲಿ ಕೊಚ್ಚಿ ಹೋಗುತ್ತಿದೆ ರಾಜ್ಯದ ಅಭಿವೃದ್ಧಿ
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ