ನಾನು ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಗೌರವಯುತವಾಗಿ ಸಕ್ರೀಯ ರಾಜಕಾರಣದಿಂದ ನಿವೃತ್ತನಾಗುತ್ತೇನೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಘೋಷಿಸಿದರು.
ನಗರದಲ್ಲಿ ಗ್ರಾಮ ಪಂಚಾಯ್ತಿ ಚುನಾವಣೆ ಸಂಬಂಧ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಸ್ವೀಕರ್ ರಮೇಶ್ ಕುಮಾರ್, ರಾಜ್ಯದಲ್ಲಿ ರಾಜಕೀಯ ವ್ಯವಸ್ಥೆಯೇ ಕಲುಷಿತವಾಗಿದೆ. ಇಂದು ರಾಜಕಾರಣ ದಲ್ಲಿ ಮೌಲ್ಯಗಳು ಉಳಿದಿಲ್ಲ ಎಂದು ವಿಷಾದದಿಂದ ಹೇಳಿದರು.
ರಾಜಕೀಯ ಜೀವನದಲ್ಲಿ ಇಷ್ಟು ವರ್ಷ ನ್ಯಾಯಯುತವಾಗಿ ಬದುಕಿದ್ದೇನೆ. ಹಣ ತೆಗೆದುಕೊಂಡು ರಾಜಕೀಯ ಮಾಡಿಲ್ಲ.ಆ ಜಾಯಮಾನವೂ ನನ್ನದಲ್ಲ ಎಂದು ರಮೇಶ್ ಕುಮಾರ್ ಹೇಳಿದರು.