ಹಿರಿಯ ಸಮಾಜವಾದಿ ನಾಯಕ, ಕೇಂದ್ರದ ಮಾಜಿ ಸಚಿವ ಶರದ್ ಯಾದವ್ (75) ಕಳೆದ ರಾತ್ರಿ
ನಿಧನರಾದರು. ಯಾದವ್ ಪುತ್ರಿ ಸುಭಾಷಿಣಿ ಯಾದವ್, ‘ಅಪ್ಪ ಇನ್ನಿಲ್ಲ’ ಎಂದು ಟ್ವೀಟ್ ಮಾಡಿ ತಿಳಿಸಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶರದ್ ಯಾದವ್, ನಿನ್ನೆ ರಾತ್ರಿ ದೆಹಲಿಯ ಛತ್ತರ್ಪುರ ನಿವಾಸದಲ್ಲಿ ಹಠಾತ್ ಕುಸಿದು ಬಿದ್ದರು.6 ಐಪಿಎಸ್ ಅಧಿಕಾರಿ’ಗಳ ವರ್ಗಾವಣೆ ಮಾಡಿದ ಸರ್ಕಾರ
ಕೂಡಲೇ ಅವರನ್ನು ಗುರುಗ್ರಾಮ್ನ ಫೋರ್ಟಿಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಅವರು ಬದುಕುಳಿಯಲಿಲ್ಲ.
ಯಾದವ್, ಬಹು ದಿನಗಳಿಂದ ಮೂತ್ರಪಿಂಡ ಕಾಯಿಲೆಗೆ ಒಳಗಾಗಿದ್ದರು.
ಶರದ್ ಯಾದವ್ 1999 ಮತ್ತು 2004ರ ನಡುವೆ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ವಿವಿಧ ಖಾತೆಗಳನ್ನು ನಿರ್ವಹಿಸಿದ್ದರು. 2003ರಲ್ಲಿ ಶರದ್ ಯಾದವ್ ಜನತಾ ದಳದ ಯುನೈಟೆಡ್ ಅಧ್ಯಕ್ಷರಾಗಿದ್ದರು.
7 ಬಾರಿ ಲೋಕಸಭೆ ಹಾಗೂ 3 ಬಾರಿ ರಾಜ್ಯಸಭಾ ಸಂಸದರಾಗಿದ್ದರು. ಯಾದವ್ ಪತ್ನಿ, ಪುತ್ರಿ ಮತ್ತು ಪುತ್ರರನ್ನು ಅಗಲಿದ್ದಾರೆ.
ಶರದ್ ಯಾದವ್ ಅಂತ್ಯಕ್ರಿಯೆಯು ಅವರ ಜನ್ಮಸ್ಥಳ ಮಧ್ಯಪ್ರದೇಶದ ಹೋಶಂಗಾಬಾದ್ನಲ್ಲಿ ನಾಳೆ ನಡೆಯಲಿದೆ. ಇಂದು ಬೆಳಗ್ಗೆ 10 ಗಂಟೆಯಿಂದ ದೆಹಲಿಯಲ್ಲಿ ಅಂತಿಮ ದರ್ಶನ ನಡೆಯಲಿದೆ.
ಶರದ್ ಯಾದವ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಬಿಹಾರ ಸಿಎಂ ನಿತೀಶ್ ಕುಮಾರ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ