ಕೃಷ್ಣಾ ನದಿಯಲ್ಲಿ ಹಾಸಿಗೆ, ಬಟ್ಟೆ ತೊಳೆಯಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಸಹೋದರರು ಕೃಷ್ಣಾ ನದಿಯಲ್ಲಿ ಜಲ ಸಮಾಧಿಯಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಬಳಿ ನಡೆದಿದೆ.
ಪರಶುರಾಮ್ ಬನಸೊಡೆ, ಶಂಕರ್ ಬನಸೊಡೆ, ಸದಾಶಿವ ಬನಸೊಡೆ, ಧರೆಪ್ಪ ಬನಸೊಡೆ ಸಾವನ್ನಪ್ಪಿದ ಸಹೋದರರು.ಈ ನಾಲ್ವರೂ ನದಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.
ನೀರಲ್ಲಿ ಕಾಲು ಜಾರಿದ ಒಬ್ಬರನ್ನು ರಕ್ಷಣೆ ಮಾಡಲು ಹೋಗಿ ಉಳಿದ ಸಹೋದರರೂ ಕೂಡ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.
ಕೊಚ್ಚಿಹೋದವರನ್ನ ಪತ್ತೆ ಮಾಡುವ ಕಾರ್ಯವನ್ನು ಸ್ಥಳೀಯರು ಸೇರಿದಂತೆ ರಕ್ಷಣಾ ಸಿಬ್ಬಂದಿ ಮಾಡುತ್ತಿದೆ. ಒಂದೇ ದಿನ ನಾಲ್ವರು ಸಹೋದರರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು