ಬೆಂಗಳೂರಿನ ಸೋಲದೇವನಹಳ್ಳಿ ಇಬ್ಬರು ಯುವತಿ ಸೇರಿ ನಾಲ್ವರು ಮಕ್ಕಳು ನಾಪತ್ತೆ ಆಗಿದ್ದವರು ಮಂಗಳೂರಿನ ಪಾಂಡೇಶ್ವರದಲ್ಲಿ ಪತ್ತೆಯಾಗಿದ್ದಾರೆ.
ಪಾಂಡೇಶ್ವರ ಠಾಣೆ ಪೊಲೀಸರು ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ಅಮೃತವರ್ಷಿಣಿ, ರಾಯನ್ ಸಿದ್ದಾಂತ್, ಭೂಮಿ, ಚಿಂತನ್ ಎಂಬ ಮಕ್ಕಳನ್ನ ರಕ್ಷಣೆ ಮಾಡಲಾಗಿದೆ. ಕೂಡಲೇ ಪೊಲೀಸರು ಮಕ್ಕಳು ಸಿಕ್ಕಿರುವ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿದ್ದಾರೆ.
ಆಟೋ ಡ್ರೈವರ್ ಸಮಯ ಪ್ರಜ್ಞೆಯಿಂದ ಮಕ್ಕಳು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಆಟೋ ಹತ್ತಿದ ಮಕ್ಕಳು ಸರಿಯಾದ ವಿಳಾಸ ಹೇಳಿರಲಿಲ್ಲ. ಮಕ್ಕಳ ಚಲನವಲನ ಗಮನಿಸಿ ಅನುಮಾನಗೊಂಡ ಆಟೋ ಚಾಲಕ, ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ನಂತರ ವಿಚಾರಿಸಿದಾಗ ಬೆಂಗಳೂರಿನಲ್ಲಿ ನಾಪತ್ತೆಯಾದ ಮಕ್ಕಳು ಎಂದು ತಿಳಿದುಬಂದಿದೆ.
ಮನೆಯವರು ನಮ್ಮನ್ನು ಬೇರೆ ಮಾಡೋಕೆ ನೋಡಿದರು. ಅದಕ್ಕೆ ಮನೆ ಬಿಟ್ಟು ಬಂದ್ವಿ. ಮೈಸೂರಿನಿಂದ ಬೆಂಗಳೂರಿಗೆ ಹೋಗಿ ಮತ್ತೆ ಮಂಗಳೂರಿಗೆ ಬಂದ್ವಿ. ಮಂಗಳೂರಿಗೆ ಬೆಳಗ್ಗೆ ಬಸ್ನಲ್ಲಿ ಬಂದ್ವಿ ಅಂತಾ ಮಕ್ಕಳು ಪೊಲೀಸರ ಮುಂದೆ ಹೇಳಿದ್ದಾರೆ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ