March 8, 2026

Newsnap Kannada

The World at your finger tips!

image 3

ಮೈಸೂರಿನಲ್ಲಿ ಒಂದೇ ಕುಟುಂಬದ ನಾಲ್ವರು ದುರಂತ ಸಾವು

Spread the love

ಮೈಸೂರು:
ನಗರದ ಅಪಾರ್ಟ್ಮೆಂಟ್​ನಲ್ಲಿ ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆಯಾಗಿರುವ ಘಟನೆ ವಿಶ್ವೇಶ್ವರ ನಗರದಲ್ಲಿ ಬೆಳಕಿಗೆ ಬಂದಿದೆ

ಚೇತನ (45), ಇವರ ಪತ್ನಿ ರೂಪಾಲಿ (43), ತಾಯಿ ಪ್ರಿಯಂವಧ (62) ಮತ್ತು ಮಗ ಕುಶಾಲ್ (15) ಸಾವನ್ನಪ್ಪಿದ್ದಾರೆ

ಚೇತನ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ತನ್ನ ತಾಯಿ, ಪತ್ನಿ ಮತ್ತು ಮಗನಿಗೆ ವಿಷ ಉಣಿಸಿದ ಬಳಿಕ ಚೇತನ್ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ಇದೆ

ಚೇತನ್ ಮೂಲತಃ ಹಾಸನ ಜಿಲ್ಲೆಯವರು. ಬೇರೆ ರಾಷ್ಟ್ರದಲ್ಲಿ ಕೆಲಸ ಮಾಡಲು ಇವರು ಕೆಲಸಗಾರರನ್ನು ನೇಮಕ ಮಾಡಿ ಕಳುಹಿಸುತ್ತಿದ್ದರು. ಸಾಲ ಹೆಚ್ಚಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ . ಆದರೆ ನಿಖರ ಕಾರಣ ಗೊತ್ತಾಗಿಲ್ಲ.

ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಡಿಸಿಪಿ ಜಾನ್ಹವಿ ಮತ್ತು ವಿದ್ಯಾರಣ್ಯಪುರಂ ಇನ್ಸ್‌ಪೆಕ್ಟರ್ ಮೋಹಿತ್ ಸೇರಿ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

error: Content is protected !!