ನಾಲ್ವರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಗುಂಡಿಕ್ಕಿ ಕೊಂದಿರುವ ಘಟನೆ ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಸೋಮವಾರ ಜರುಗಿದೆ.
ಭಯೋತ್ಪಾದಕರಿಗೆ ಶರಣಾಗುವಂತೆ ಭದ್ರತಾ ಪಡೆ ಹೇಳಿದಾಗ ಉಗ್ರರು ನಿರಾಕರಿಸಿ,. ಗುಂಡಿನ ಚಕಮಕಿ ನಡೆಸಿದರು. ಈ ಘಟನೆಯಲ್ಲಿ ನಾಲ್ವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಸೇನಾ ಅಧಿಕಾರಿಗಳು ಹೇಳಿದ್ದಾರೆ.
ಉಗ್ರರ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆ ಭದ್ರತಾ ಪಡೆಗಳು ಮಧ್ಯರಾತ್ರಿ ಜಿಲ್ಲೆಯ ಮಣುಹಾಲ್ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಆರಂಭಿಸಿತು.
ಈ ವೇಳೆ ಭದ್ರತಾ ಪಡೆಯ ಮೇಲೆ ಭಯೋತ್ಪಾದಕರು ಗುಂಡು ಹಾರಿಸಲು ಆರಂಭಿಸಿದರು. ಬಳಿಕ ಒಂದೆರಡು ಗಂಟೆಗಳ ಕಾಲ ಭಯೋತ್ಪಾದಕರು ಹಾಗೂ ಭದ್ರತಾಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯಿತು. ಕೊನೆಯಲ್ಲಿ ಸೇನೆಯ ದಾಳಿಗೆ ಉಗ್ರರು ಹತರಾದರು. ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.