ಇದನ್ನು ಓದಿ –ಜೆಡಿಎಸ್ ನಿಂದ ರಾಜ್ಯಸಭೆಗೆ ಕುಪೇಂದ್ರ ರೆಡ್ಡಿ ಟಿಕೆಟ್ ಪೈನಲ್
ವಿಮಾನವು ಮುಸ್ತಾಂಗ್ ಜಿಲ್ಲೆಯಲ್ಲಿ ಹಾರಾಟ ನಡೆಸಿದ್ದು ಕಾಣಿಸಿಕೊಂಡ ಬಳಿಕ ಧೌಲಗಿರಿ ಪರ್ವತದತ್ತ ಹಾರಿದ ಬಳಿಕ ಕಣ್ಮರೆಯಾಗಿದೆ. ಅದೇ ಸಂದರ್ಭದಲ್ಲಿ ಸಂಪರ್ಕ ಕಡಿತಗೊಂಡಿದೆ ಎಂದು ಜಿಲ್ಲಾಧಿಕಾರಿ ನೇತ್ರಾ ಪ್ರಸಾದ್ ತಿಳಿಸಿದ್ದರು.
ವಿಮಾನದಲ್ಲಿದ್ದ ಬಹುತೇಕ ಎಲ್ಲರೂ ಬದುಕುಳಿದಿರುವ ಸಾಧ್ಯತೆ ತೀರ ಕಡಿಮೆ ಎನ್ನಲಾಗಿದ್ದು, ಪರ್ವತ ಪ್ರದೇಶವಾಗಿರುವುದರಿಂದ ವಿಮಾನ ಪತನಗೊಂಡ ಸ್ಥಳ ಸ್ಥಳದಲ್ಲಿ ಭೂ ಕುಸಿತ ಉಂಟಾಗಿರುವುದರಿಂದ ಸೇನೆ ಸ್ಥಳಕ್ಕೆ ಕ್ಕೆ ಹೋಗಲು ಕಷ್ಟಕರವಾಗುತ್ತಿದೆ.
ಮುಂಬೈ ಮೂಲದ ಅಶೋಕ್ ಕುಮಾರ್ ತ್ರಿಪಾಠಿ, ಧನುಶ್ ತ್ರಿಪಾಠಿ, ರಿತಿಕಾ ತ್ರಿಪಾಠೀ ಮತ್ತು ವೈಭವ ತ್ರಿಪಾಠಿ ಒಂದೇ ಕುಟುಂಬ ನಾಲ್ವರು ಇದ್ದರು. ಮೂವರು ಸಿಬ್ಬಂದಿ ಸೇರಿ ಜರ್ಮನ್ನ ಇಬ್ಬರು ಮತ್ತು 13 ಮಂದಿ ನೇಪಾಳ ಮೂಲದವರಿದ್ದರು ಎಂದು ಏರ್ಲೈನ್ ವಕ್ತಾರ ಸುದರ್ಶನ್ ಭರ್ತುವಾಲ ತಿಳಿಸಿದ್ದಾರೆ.
ತಾರಾ ಏರ್ 9ಎನ್ಎಇಟಿ ಎರಡು ಇಂಜಿನ್ವುಳ್ಳ ಖಾಸಗಿ ವಿಮಾನ ಭಾನುವಾರ ಬೆಳಗ್ಗೆ ಕಣ್ಮರೆಯಾಗಿತ್ತು. ಪೋಖ್ರಾದಿಂದ ಹಾರಾಟ ನಡೆಸಿದ್ದ ವಿಮಾನ ಬೆಳಗ್ಗೆ 9.55ಕ್ಕೆ ಸಂಪರ್ಕ ಕಡಿತಗೊಂಡಿತ್ತು. ಕಠ್ಮಂಡುವಿನಿಂದ ಸುಮಾರು 200 ಕಿಮೀ ದೂರದ ಜೊಮ್ಸನ್ ನಗರದ ಬಳಿ ಹಾರಾಟ ನಡೆಸುವ ವೇಳೆ ವಿಮಾನ ನಾಪತ್ತೆಯಾಗಿತ್ತು.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ