Main News

ನಾಲ್ವರು ಮುಂಬೈನವರು ಸೇರಿ 22 ಪ್ರಯಾಣಿಕರಿದ್ದ ವಿಮಾನ, ಪ್ರಯಾಣಿಕರ ಗುರುತು ಪತ್ತೆ

ನೇಪಾಳದಲ್ಲಿ ಭಾನುವಾರ ಬೆಳಗ್ಗೆ ನಾಪತ್ತೆಯಾಗಿದ್ದ ವಿಮಾನ ಪತ್ತೆಯಾಗಿದ್ದು, ಕಾರ್ಯಾಚರಣೆ ಮುಂದುವರಿದಿದೆ. ಕೊವಾಂಗ್​ ಪರ್ವತ ಪ್ರದೇಶದಲ್ಲಿ ವಿಮಾನ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರತೀಯ ಮೂಲದ ನಾಲ್ವರು ಪ್ರಯಾಣಿಕರು ಮುಂಬೈ ಮೂಲದವರೆಂದು ತಿಳಿದುಬಂದಿದೆ.

plane crash

ಇದನ್ನು ಓದಿ –ಜೆಡಿಎಸ್ ನಿಂದ ರಾಜ್ಯಸಭೆಗೆ ಕುಪೇಂದ್ರ ರೆಡ್ಡಿ ಟಿಕೆಟ್ ಪೈನಲ್

ವಿಮಾನವು ಮುಸ್ತಾಂಗ್​​ ಜಿಲ್ಲೆಯಲ್ಲಿ ಹಾರಾಟ ನಡೆಸಿದ್ದು ಕಾಣಿಸಿಕೊಂಡ ಬಳಿಕ ಧೌಲಗಿರಿ ಪರ್ವತದತ್ತ ಹಾರಿದ ಬಳಿಕ ಕಣ್ಮರೆಯಾಗಿದೆ. ಅದೇ ಸಂದರ್ಭದಲ್ಲಿ ಸಂಪರ್ಕ ಕಡಿತಗೊಂಡಿದೆ ಎಂದು ಜಿಲ್ಲಾಧಿಕಾರಿ ನೇತ್ರಾ ಪ್ರಸಾದ್​​ ತಿಳಿಸಿದ್ದರು.

ವಿಮಾನದಲ್ಲಿದ್ದ ಬಹುತೇಕ ಎಲ್ಲರೂ ಬದುಕುಳಿದಿರುವ ಸಾಧ್ಯತೆ ತೀರ ಕಡಿಮೆ ಎನ್ನಲಾಗಿದ್ದು, ಪರ್ವತ ಪ್ರದೇಶವಾಗಿರುವುದರಿಂದ ವಿಮಾನ ಪತನಗೊಂಡ ಸ್ಥಳ ಸ್ಥಳದಲ್ಲಿ ಭೂ ಕುಸಿತ ಉಂಟಾಗಿರುವುದರಿಂದ ಸೇನೆ ಸ್ಥಳಕ್ಕೆ ಕ್ಕೆ ಹೋಗಲು ಕಷ್ಟಕರವಾಗುತ್ತಿದೆ.

ಮುಂಬೈ ಮೂಲದ ಅಶೋಕ್​ ಕುಮಾರ್ ತ್ರಿಪಾಠಿ, ಧನುಶ್​​ ತ್ರಿಪಾಠಿ, ರಿತಿಕಾ ತ್ರಿಪಾಠೀ ಮತ್ತು ವೈಭವ ತ್ರಿಪಾಠಿ ಒಂದೇ ಕುಟುಂಬ ನಾಲ್ವರು ಇದ್ದರು. ಮೂವರು ಸಿಬ್ಬಂದಿ ಸೇರಿ ಜರ್ಮನ್​ನ ಇಬ್ಬರು ಮತ್ತು 13 ಮಂದಿ ನೇಪಾಳ ಮೂಲದವರಿದ್ದರು ಎಂದು ಏರ್​ಲೈನ್​ ವಕ್ತಾರ ಸುದರ್ಶನ್​ ಭರ್ತುವಾಲ ತಿಳಿಸಿದ್ದಾರೆ.

ತಾರಾ ಏರ್​ 9ಎನ್​​ಎಇಟಿ ಎರಡು ಇಂಜಿನ್​​ವುಳ್ಳ ಖಾಸಗಿ ವಿಮಾನ ಭಾನುವಾರ ಬೆಳಗ್ಗೆ ಕಣ್ಮರೆಯಾಗಿತ್ತು. ಪೋಖ್ರಾದಿಂದ ಹಾರಾಟ ನಡೆಸಿದ್ದ ವಿಮಾನ ಬೆಳಗ್ಗೆ 9.55ಕ್ಕೆ ಸಂಪರ್ಕ ಕಡಿತಗೊಂಡಿತ್ತು. ಕಠ್ಮಂಡುವಿನಿಂದ ಸುಮಾರು 200 ಕಿಮೀ ದೂರದ ಜೊಮ್ಸನ್​​ ನಗರದ ಬಳಿ ಹಾರಾಟ ನಡೆಸುವ ವೇಳೆ ವಿಮಾನ ನಾಪತ್ತೆಯಾಗಿತ್ತು.

Team Newsnap
Leave a Comment
Share
Published by
Team Newsnap

Recent Posts

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024