Main News

ಶಾಂಭವಿ ನದಿಯಲ್ಲಿ ಮುಳುಗಿ ನಾಲ್ವರ ಸಾವು: ಮದುವೆಗೆ ಬಂದವರು ಮಸಣ ಸೇರಿದರು

ನದಿಯಲ್ಲಿ ಈಜಲು ಹೋಗಿ ನಾಲ್ವರು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಪಾಲಾಡ್ಕ ಗ್ರಾಮದ ಶಾಂಭವಿ ನದಿಯ ಪಟ್ಲಗುಂಡಿ ಎಂಬ ಪ್ರದೇಶದಲ್ಲಿ ನಡೆದಿದೆ.

ಮೃತರನ್ನು ಮೂಡುಶೆಡ್ಡೆ ನಿವಾಸಿ 18 ವರ್ಷದ ನಿಖಿಲ್, 20 ವರ್ಷದ ಹರ್ಷಿತಾ, ವೇಣೂರು ನಿವಾಸಿ 19 ವರ್ಷದ ಸುಭಾಷ್ ಮತ್ತು ಬಜ್ಪೆ ನಿವಾಸಿ 30 ವರ್ಷದ ರವಿ ಎಂದು ಗುರುತಿಸಲಾಗಿದೆ. 

ಗ್ರಾಮದ ಕಡಂದಲೆ ಶ್ರೀಧರ ಆಚಾರ್ಯ ಎಂಬುವವರ ಮನೆಯಲ್ಲಿ ಮದುವೆಯ ಸಂಭ್ರಮವಿತ್ತು. ಮೊನ್ನೆಯೇ ಎಲ್ಲಾ ಸಂಬಂಧಿಕರು ಮನೆಗೆ ಆಗಮಿಸಿದ್ದರು. ಶಾಂಭವಿ ನದಿಯ ಪಟ್ಲಗುಂಡಿ ಬಳಿ ಮೊನ್ನೆ ಸಂಜೆ ಆಟವಾಡಲು ಹೋಗಿದ್ದರು. ಈಜು ಬರದಿದ್ದರು ಕೂಡ ಮೊನ್ನೆ ಆಟವಾಡಿ ಮದುವೆ ಮನೆಗೆ ವಾಪಾಸ್ ಆಗಿದ್ದರು. 

ನಿನ್ನೆ ಕೂಡ ಈ ನಾಲ್ವರು ನೀರಿನಲ್ಲಿ ಆಟವಾಡುತ್ತಾ ಈಜಾಡಲು ಅಲ್ಲಿಗೆ ಹೋಗಿದ್ದಾರೆ. ಆದರೆ, ನಾಲ್ವರದಲ್ಲಿ ಹರ್ಷಿತಾ ಆಟವಾಡುತ್ತಾ ನೀರಿನಲ್ಲಿ ಮುಳುಗಿದ್ದಾಳೆ. ಅವಳನ್ನು ರಕ್ಷಿಸಲು ಹೋದ ಒಬ್ಬಬ್ಬರೂ ಕೂಡ ಮುಳುಗುತ್ತಾ ಸಾವನ್ನಪ್ಪಿದ್ದಾರೆ.

ಇದನ್ನು ನೋಡಿದ ಸ್ಥಳೀಯರೊಬ್ಬರು ಮಾಹಿತಿ ನೀಡಿ ಇಡೀ ಗ್ರಾಮವೇ ಅಲ್ಲಿ ಜಾಮಾಯಿಸಿತ್ತು. ಇನ್ನು ಅಗ್ನಿಶಾಮಕದಳ ಸಿಬ್ಬಂದಿಗಳು, ಈಜುಗಾರರು ಮತ್ತು ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಆಗಮಿಸಿದರು. ಅಗ್ನಿಶಾಮಕದಳ ಸಿಬ್ಬಂದಿ ಮತ್ತು ಸ್ಥಳೀಯ ಈಜುಗಾರರು ನಾಲ್ವರ ಶವಗಳನ್ನು ಕೂಡ ಹೊರತೆಗೆದಿದ್ದಾರೆ.

ಇನ್ನು ಈ ದುರ್ಘಟನೆಯಿಂದಾಗಿ ಇಡೀ ಮದುವೆ ಮನೆಯಲ್ಲಿ ಸಂಭ್ರಮಕ್ಕೆ ಬ್ರೇಕ್ ಬಿದ್ದಿದೆ.

ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಮೂಡುಬಿದಿರೆ ಆಸ್ಪತ್ರೆಗೆ ರವಾನಿಸಲಾಗಿದೆ. ಮದುವೆಯ ಸಂಭ್ರಮಕ್ಕೆ ಬಂದವರು ಮಸಣ ಸೇರಿದ್ದು ನಿಜಕ್ಕೂ ದುರಂತ.

Team Newsnap
Leave a Comment
Share
Published by
Team Newsnap

Recent Posts

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024

ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More

May 16, 2024

ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್‌ಐಎ

ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)… Read More

May 15, 2024

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ

ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More

May 15, 2024