ನದಿಯಲ್ಲಿ ಈಜಲು ಹೋಗಿ ನಾಲ್ವರು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಪಾಲಾಡ್ಕ ಗ್ರಾಮದ ಶಾಂಭವಿ ನದಿಯ ಪಟ್ಲಗುಂಡಿ ಎಂಬ ಪ್ರದೇಶದಲ್ಲಿ ನಡೆದಿದೆ.
ಮೃತರನ್ನು ಮೂಡುಶೆಡ್ಡೆ ನಿವಾಸಿ 18 ವರ್ಷದ ನಿಖಿಲ್, 20 ವರ್ಷದ ಹರ್ಷಿತಾ, ವೇಣೂರು ನಿವಾಸಿ 19 ವರ್ಷದ ಸುಭಾಷ್ ಮತ್ತು ಬಜ್ಪೆ ನಿವಾಸಿ 30 ವರ್ಷದ ರವಿ ಎಂದು ಗುರುತಿಸಲಾಗಿದೆ.
ಗ್ರಾಮದ ಕಡಂದಲೆ ಶ್ರೀಧರ ಆಚಾರ್ಯ ಎಂಬುವವರ ಮನೆಯಲ್ಲಿ ಮದುವೆಯ ಸಂಭ್ರಮವಿತ್ತು. ಮೊನ್ನೆಯೇ ಎಲ್ಲಾ ಸಂಬಂಧಿಕರು ಮನೆಗೆ ಆಗಮಿಸಿದ್ದರು. ಶಾಂಭವಿ ನದಿಯ ಪಟ್ಲಗುಂಡಿ ಬಳಿ ಮೊನ್ನೆ ಸಂಜೆ ಆಟವಾಡಲು ಹೋಗಿದ್ದರು. ಈಜು ಬರದಿದ್ದರು ಕೂಡ ಮೊನ್ನೆ ಆಟವಾಡಿ ಮದುವೆ ಮನೆಗೆ ವಾಪಾಸ್ ಆಗಿದ್ದರು.
ನಿನ್ನೆ ಕೂಡ ಈ ನಾಲ್ವರು ನೀರಿನಲ್ಲಿ ಆಟವಾಡುತ್ತಾ ಈಜಾಡಲು ಅಲ್ಲಿಗೆ ಹೋಗಿದ್ದಾರೆ. ಆದರೆ, ನಾಲ್ವರದಲ್ಲಿ ಹರ್ಷಿತಾ ಆಟವಾಡುತ್ತಾ ನೀರಿನಲ್ಲಿ ಮುಳುಗಿದ್ದಾಳೆ. ಅವಳನ್ನು ರಕ್ಷಿಸಲು ಹೋದ ಒಬ್ಬಬ್ಬರೂ ಕೂಡ ಮುಳುಗುತ್ತಾ ಸಾವನ್ನಪ್ಪಿದ್ದಾರೆ.
ಇದನ್ನು ನೋಡಿದ ಸ್ಥಳೀಯರೊಬ್ಬರು ಮಾಹಿತಿ ನೀಡಿ ಇಡೀ ಗ್ರಾಮವೇ ಅಲ್ಲಿ ಜಾಮಾಯಿಸಿತ್ತು. ಇನ್ನು ಅಗ್ನಿಶಾಮಕದಳ ಸಿಬ್ಬಂದಿಗಳು, ಈಜುಗಾರರು ಮತ್ತು ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಆಗಮಿಸಿದರು. ಅಗ್ನಿಶಾಮಕದಳ ಸಿಬ್ಬಂದಿ ಮತ್ತು ಸ್ಥಳೀಯ ಈಜುಗಾರರು ನಾಲ್ವರ ಶವಗಳನ್ನು ಕೂಡ ಹೊರತೆಗೆದಿದ್ದಾರೆ.
ಇನ್ನು ಈ ದುರ್ಘಟನೆಯಿಂದಾಗಿ ಇಡೀ ಮದುವೆ ಮನೆಯಲ್ಲಿ ಸಂಭ್ರಮಕ್ಕೆ ಬ್ರೇಕ್ ಬಿದ್ದಿದೆ.
ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಮೂಡುಬಿದಿರೆ ಆಸ್ಪತ್ರೆಗೆ ರವಾನಿಸಲಾಗಿದೆ. ಮದುವೆಯ ಸಂಭ್ರಮಕ್ಕೆ ಬಂದವರು ಮಸಣ ಸೇರಿದ್ದು ನಿಜಕ್ಕೂ ದುರಂತ.
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More
ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)… Read More
ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More
This website uses cookies.
Leave a Comment