ಶಿವಮೊಗ್ಗದ ಒಂದೇ ಕುಟುಂಬದ 4 ಮಂದಿಗೆ ಬ್ರಿಟನ್ ನ ರೂಪಾಂತರ ಕೊರೊನಾ ವೈರಸ್ ಸೋಂಕು ತಗುಲಿದೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ತಿಳಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಯುಕೆ ವಾಪಸಿಗರ ಪೈಕಿ 107 ಜನರಿಗೆ ಆರ್.ಟಿ-ಪಿಸಿಆರ್ ಪಾಸಿಟಿವ್ ಬಂದಿತ್ತು. ಇವರೆಲ್ಲರ ಮಾದರಿಯನ್ನು ಸೀಕ್ವೆನ್ಸ್ ಪರೀಕ್ಷೆ ಮಾಡಲಾಗಿತ್ತು. 107ರಲ್ಲಿ 20 ಜನರಿಗೆ ರೂಪಾಂತರಿ ವೈರಸ್ ಕಂಡು ಬಂದಿದೆ.
ಬೆಂಗಳೂರು 3 ಮತ್ತು ಶಿವಮೊಗ್ಗದ ನಾಲ್ವರಲ್ಲಿ ಹೊಸ ರೂಪಾಂತರ ವೈರಸ್ ಕಂಡು ಬಂದಿದೆ. ಸೋಂಕಿತರ ಸಂಪರ್ಕಿತರನ್ನು ಸಾಂಸ್ಥಿಕ ಕ್ವಾರಂಟೈನ್ ನಲ್ಲಿರಿಸಲಾಗಿದೆ ಎಂದರು.
ಬೆಂಗಳೂರಿನ ಮೂವರು 39 ಜನರೊಂದಿಗೆ ಸಂಪರ್ಕ ಹೊಂದಿದ್ದರು. ಶಿವಮೊಗ್ಗ ಸೋಂಕಿತರ ಸಂಪರ್ಕದಲ್ಲಿದ್ದವರ ಕೆಲವರ ವರದಿ ಪಾಸಿಟಿವ್ ಬಂದಿದೆ ಎಂದು ಹೇಳಿದರು.
ಸೋಂಕಿತರ ಆರೋಗ್ಯ ಸ್ಥಿರವಾಗಿದೆ. ಎಲ್ಲರಿಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವೈರಸ್ ತೀವ್ರತೆ ಕಡಿಮೆ, ಆದ್ರೆ ಹರಡುವ ಗುಣ ಶೇ.70ಕ್ಕಿಂತ ಅಧಿಕ. ಹಾಗಾಗಿ ಸರ್ಕಾರ ಕೊರೊನಾ ಹರಡುವಿಕೆಯನ್ನು ತಡೆಯುವ ಕೆಲಸ ಮಾಡುತ್ತಿದೆ. ನಾಪತ್ತೆ ಆಗಿರುವ ಕೆಲವರ ಶೋಧದಲ್ಲಿ ಗೃಹ ಇಲಾಖೆ ತೊಡಗಿಕೊಂಡಿದೆ ಎಂದು ತಿಳಿಸಿದರು.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment