ಕೆ ಆರ್ ಪೇಟೆ ತಾಲೂಕಿನ ಹೇಮಗಿರಿಯ ಶ್ರೀ ಕಲ್ಯಾಣ ವೆಂಕಟರಮಣಸ್ವಾಮಿ ಯವರ ದನಗಳ ಜಾತ್ರೆಯು ಫೆ.10ರಿಂದ ಆರಂಭವಾಗಲಿದೆ. ಫೆ.19ರಂದು ಬ್ರಹ್ಮರಥೋತ್ಸವ ಹಾಗೂ ಫೆ. 23ರಂದು ತೆಪ್ಪೋತ್ಸವ ನಡೆಯಲಿದೆ ಎಂದು ತಹಶೀಲ್ದಾರ್ ಎಂ.ಶಿವಮೂರ್ತಿ ತಿಳಿಸಿದ್ದಾರೆ.
ಜಾತ್ರೆ ಕುರಿತಂತೆ ವಿವರ ನೀಡಿದ ಎಂ ಶಿವಮೂರ್ತಿ ಭೃಗು ಮಹರ್ಷಿಗಳ ತಪೋಭೂಮಿಯಾಗಿರುವ ಬಂಡಿಹೊಳೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೇಮಗಿರಿ ಕ್ಷೇತ್ರದಲ್ಲಿ ಈ ಭಾರಿ ದನಗಳ ಜಾತ್ರೆ ಹಾಗೂ ರಥೋತ್ಸವವನ್ನು ಅದ್ದೂರಿಯಾಗಿ ನಡೆಸಲಾಗುತ್ತಿದೆ ಎಂದರು.
ಫೆ.10 ರಿಂದ-15ರ ವರೆಗೆ ದನಗಳ ಜಾತ್ರೆಗೆ ತಾಲ್ಲೂಕು ಆಡಳಿತವು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಫೆ.10ರ ನಂತರವೇ ರೈತ ಬಾಂಧವರು ತಮ್ಮ ರಾಸುಗಳೊಂದಿಗೆ ಹೇಮಗಿರಿ ಜಾತ್ರೆಗೆ ಬರಬೇಕು. ನಿಗಧಿತ ದಿನಾಂಕಕ್ಕಿಂತ ಮುಂಚಿತವಾಗಿ ಆಗಮಿಸುವ ರಾಸುಗಳನ್ನು ಜಾತ್ರಾ ಮಾಳಕ್ಕೆ ಸೇರಿಸಲಾಗುವುದಿಲ್ಲ ಎಂದು ಹೇಳಿದರು.
ಜಾತ್ರೆಗೆ ಆಗಮಿಸುವ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮತ್ತು ಜಾತ್ರಾ ಮಾಳಕ್ಕೆ ಬೆಳಕಿನ ವ್ಯವಸ್ಥೆ ಸೇರಿದಂತೆ ಕನಿಷ್ಠ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಆದ್ದರಿಂದ ನಿಗಧಿತ ದಿನಾಂಕದ ನಂತರವೇ ಜಾತ್ರೆಗೆ ಬರಬೇಕು ಎಂದರು.
ಉತ್ತಮ ರಾಸುಗಳಗೆ ಉಡುಗೊರೆ:
ಜಾತ್ರೆಗೆ ಆಗಮಿಸಿರುವ ಉತ್ತಮವಾದ ರಾಸುಗಳಿಗೆ ಮಾಕವಳ್ಳಿಯ ಕೋರಮಂಡಲ್ ಸಕ್ಕರೆ ಕಾರ್ಖಾನೆಯ ವತಿಯಿಂದ ಚಿನ್ನ ಮತ್ತು ಬೆಳ್ಳಿಯ ಉಡುಗೊರೆಗಳ ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ನೀಡಲು ಬಹುಮಾನದ ಆಯ್ಕೆಗೆ ರಾಸುಗಳು ಹಾಗೂ ಕುರಿ, ಟಗರು ಸೇರಿದಂತೆ ಇತರೆ ಸಾಕು ಪ್ರಾಣಿಗಳನ್ನು ಫೆ.14ರಂದು ತಜ್ಞರ ಸಮಿತಿಯು ಆಯ್ಕೆಮಾಡಲಿದೆ.
ಕೇವಲ ಬಹುಮಾನ ಪಡೆಯಲು ಜಾತ್ರೆಯ ಹಿಂದಿನ ದಿನ ತೋರಿಕೆಗಾಗಿ ಜಾತ್ರಾಮಾಳಕ್ಕೆ ಬರುವ ರಾಸುಗಳಿಗೆ ಬಹುಮಾನವನ್ನು ನೀಡಲಾಗುವುದಿಲ್ಲ. ಫೆ.10ರ ನಂತರವೇ ರಾಸುಗಳನ್ನು ಜಾತ್ರೆಗೆ ಕರೆತರಬೇಕು ಎಂದು ಕೋರಿದರು.
ಹೇಮಾವತಿ ನದಿಯಲ್ಲಿ ಫೆ.23ರ ರಾತ್ರಿ ಶ್ರೀ ಕಲ್ಯಾಣ ವೆಂಕಟರಮಣಸ್ವಾಮಿ ಯವರ ವೈಭವದ ತೆಪ್ಪೋತ್ಸವವು ಬಾಣಬಿರುಸುಗಳು ಹಾಗೂ ಹೂಕುಂಡಗಳ ನಕ್ಷತ್ರಗಳ ಬೆಳಕಿನಲ್ಲಿ ನಡೆಯಲಿದೆ. ಫೆ.19ರಂದು ಬೆಳಿಗ್ಗೆ 10ಗಂಟೆಗೆ ಜರುಗಲಿರುವ ಬ್ರಹ್ಮರಥೋತ್ಸವಕ್ಕೆ ಜಾನಪದ ಕಲಾತಂಡಗಳ ನೃತ್ಯ ಪ್ರದರ್ಶನಗಳ ಮೆರವಣಿಗೆಯು ಜಾತ್ರೆಯ ಅಂದಕ್ಕೆ ಕಳೆಕಟ್ಟಲಿದೆ.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment