ರಾಷ್ಟ್ರೀಕೃತ ಬ್ಯಾಂಕ್ಗಳಿಗಿಂತಹೆಚ್ಚಿನ ಬಡ್ಡಿ ಕೊಡುತ್ತಾರೆ ಎನ್ನೋ ಆಸೆಯಿಂದ ಇದ್ದ ನಿವೃತ್ತ ನೌಕರರನ್ನುಖಾಸಗಿ ಬ್ಯಾಂಕ್ ಒಂದು ವಂಚಿಸಿರುವ ಘಟನೆ ರಾಮನಗರದಲ್ಲಿ ನಡೆದಿದೆ.
ನಿವೃತ್ತ ನೌಕರರನ್ನು ಟಾರ್ಗೆಟ್ ಮಾಡಿದ್ದ ಬ್ಯಾಂಕ್ನವರು, ಡಬಲ್ ಹಣ ನೀಡೋದಾಗಿ ಹಣ ಠೇವಣಿ ಮಾಡಿಸಿಕೊಂಡು ಅವಧಿ ಮುಗಿದ ಬಳಿಕ ಹಣ ನೀಡದೆ ಕಚೇರಿಯನ್ನು ಬಂದ್ ಮಾಡಿ ಎಸ್ಕೇಪ್ ಆಗಿದ್ದಾರೆ.
ರಾಮನಗರದ ಪಂಚವಟಿ ಮಲ್ಟಿಸ್ಟೇಟ್ ಕ್ರೆಡಿಟ್ ಕೋ-ಆಪರೇಟಿವ್ ಬ್ಯಾಂಕ್ನಿಂದ ಷೇರುದಾರಿಗೆ ಪಂಗನಾಮ ಹಾಕಲಾಗಿದೆ.ಶ್ರೀರಾಮ ದೇವರ ಬೆಟ್ಟ ಯೋಜನೆ ತಡೆಯಲು ಸಾಧ್ಯವಿಲ್ಲ: ಸಚಿವ ಅಶ್ವತ್ಥ್ ನಾರಾಯಣ್
ಹಣ ಕಳೆದುಕೊಂಡ ಷೇರುದಾರರು ಈಗ ಪೊಲೀಸರ ಮೊರೆಹೋಗಿದ್ದಾರೆ. ರಾಮನಗರದ ಐಜೂರಿನಲ್ಲಿರುವ ಪಂಚವಟಿ ಮಲ್ಟಿಸ್ಟೇಟ್ ಕ್ರೆಡಿಟ್ ಕೋ-ಆಪರೇಟಿವ್ ಬ್ಯಾಂಕ್ನಲ್ಲಿ ನೂರಾರು ಜನರು ಕೊಟ್ಯಂತರ ರೂ. ಹಣ ಹೂಡಿಕೆ ಮಾಡಿದ್ರು. ನಿವೃತ್ತ ನೌಕರನ್ನು ಟಾರ್ಗೆಟ್ ಮಾಡಿದ್ದ ಬ್ಯಾಂಕ್ನವರು ಡಬಲ್ ಹಣ ನೀಡೋದಾಗಿ ಹಣ ಠೇವಣಿ ಮಾಡಿಸಿಕೊಂಡು ಅವಧಿ ಮುಗಿದ ಬಳಿಕ ಹಣ ನೀಡದೇ ಕಚೇರಿಯನ್ನು ಬಂದ್ ಮಾಡಿ ಎಸ್ಕೇಪ್ ಆಗಿದ್ದಾರೆ. ಹೆಚ್ಚಿನ ಹಣದ ಆಸೆಗೆ ಹೂಡಿಕೆ ಮಾಡಿದ್ದ ಷೇರುದಾರರು ಇದ್ದ ಹಣವನ್ನು ಕಳೆದುಕೊಂಡು ಅತಂತ್ರರಾಗಿದ್ದಾರೆ.
ಠೇವಣಿ ಹಣ ಹಿಂಪಡೆಯಲು ಹೋದಾಗ ಷೇರುದಾರರನ್ನು ಸತಾಯಿಸಿದ ಬ್ಯಾಂಕ್ನ ಆಡಳಿತ ಮಂಡಳಿ ಈಗ ಹಣ ಹಿಂತಿರುಗಿಸದೆ ಎಸ್ಕೇಪ್ ಆಗಿದೆ ಎಂಬ ಆರೋಪವಿದೆ. ಜಿಲ್ಲೆಯಾದ್ಯಂತ ನಮ್ಮ ಬ್ರಾಂಚ್ ಇದೆ. ರಾಷ್ಟ್ರೀಕೃತ ಬ್ಯಾಂಕ್ಗಿಂತಲೂ ಹೆಚ್ಚಿನ ಬಡ್ಡಿ ನೀಡ್ತೇವೆ ಎಂದು ಬ್ಯಾಂಕ್ನವರು ಕೊಟ್ಯಂತರ ರೂ. ಪಡೆದಿದ್ದಾರೆ. ಆದ್ರೆ ಈಗ ಬೆಂಗಳೂರಿನ ಕಚೇರಿಯನ್ನೂ ಸಹ ಬಂದ್ ಮಾಡಿ ಆಡಳಿತ ಮಂಡಳಿಯವರು ಎಸ್ಕೇಪ್ ಆಗಿದ್ದಾರೆ.
ಈ ಸಂಬಂಧ ರಾಮನಗರ ಸೈಬರ್ ಕ್ರೈಂ ಬ್ರ್ಯಾಂಚ್ನಲ್ಲಿ 11 ಮಂದಿ ಷೇರುದಾರರು ದೂರು ನೀಡಿದ್ದು ಬ್ಯಾಂಕ್ನ 8 ಮಂದಿ ವಿರುದ್ಧ ಎಫ್ಐಆರ್ (FIR) ದಾಖಲಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ರಾಮನಗರದ ಬ್ರಾಂಚ್ನ ಬ್ಯಾಂಕ್ ದಾಖಲೆಗಳನ್ನು ಸೀಜ್ ಮಾಡಿ ತನಿಖೆ ಕೈಗೊಂಡಿದ್ದಾರೆ.
- 40 ಸಾವಿರ ರು ಲಂಚ ಸ್ವೀಕಾರ : ಲೋಕಾ ಬಲೆಗೆ ಬಿದ್ದ ಅಧಿಕಾರಿ
- ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ – ಪೋಲಿಸರಿಗೆ ಸಿಎಂ ಸಿದ್ದು ಕಿವಿಮಾತು
- ನಕಲಿ ಮುಖವಾಡದೊಳಗಿನ ಅಸಲೀ ಮುಖಗಳು..
- ಸೆ.28 ರಿಂದ 18 ದಿನಗಳವರೆಗೆ ತ. ನಾಡಿಗೆ ಮತ್ತೆ ನಿತ್ಯ 3 ಸಾವಿರ ಕ್ಯುಸೆಕ್ ನೀರು ಬಿಡಲು ಆದೇಶ – ರಾಜ್ಯಕ್ಕೆ ಶಾಕ್
- ನಟ ಬ್ಯಾಂಕ್ ಜನಾರ್ಧನ್ ಗೆ ಹೃದಯಾಘಾತ: ಐಸಿಯುನಲ್ಲಿ ಚಿಕಿತ್ಸೆ
- ಮಂಡ್ಯದಲ್ಲಿ ಬಿಜೆಪಿ ನಾಯಕರಿಂದ ಚಡ್ಡಿ ಮೆರವಣಿಗೆ : ರಾಜ್ಯ ಸರ್ಕಾರದ ವಿರುದ್ದ ಆಕ್ರೋಷ