ವೃದ್ಧೆಯೊಬ್ಬರು ಮೃತಪಟ್ಟು ಐದು ವರ್ಷವಾದ ಬಳಿಕ ಅವರ ಅಂಚೆ ಖಾತೆಯಲ್ಲಿದ್ದ 19 ಸಾವಿರ ಹಣ ಡ್ರಾ ಮಾಡಿಕೊಂಡರುವ ಘಟನೆ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಕೆರಗೋಡು ಗ್ರಾಮದ ನಿವಾಸಿ ವಿಜಯಾಂಭ ಎಂಬವವರು 2011 ಜೂನ್ 18 ರಂದು ಮೃತಪಟ್ಟಿದ್ದಾರೆ. ಕುಟುಂಬಸ್ಥರಿಗೆ ವಿಜಯಾಂಭ ಅವರು ಅಂಚೆ ಕಚೇರಿಯಲ್ಲಿ ಖಾತೆ ಹೊಂದಿದ್ದಾರೆ ಎಂದು 2018ರಲ್ಲಿ ಮನೆಯನ್ನು ಸ್ವಚ್ಚಗೊಳಿಸುವ ವೇಳೆ ಸಿಕ್ಕ ಪಾಸ್ಬುಕ್ನಿಂದ ತಿಳಿದು ಬಂದಿದೆ.
ನಂತರ ಆ ಪಾಸ್ಬುಕ್ ಹಾಗೂ ವಿಜಯಾಂಭ ಅವರ ಡೆತ್ ಸರ್ಟಿಫಿಕೇಟ್ನ್ನು ತೆಗೆದುಕೊಂಡು ಅಂಚೆ ಕಚೇರಿಗೆ ಹೋಗಿ ಅಂಚೆ ಅಕೌಂಟ್ ಬಗ್ಗೆ ಕುಟುಂಬಸ್ಥರು ಪರಿಶೀಲನೆ ಮಾಡಿದ್ದಾರೆ.
ಈ ವೇಳೆ 2016ರ ಜೂನ್ 28 ರಂದು ವಿಜಯಾಂಭ ಖಾತೆಯಿಂದ 19 ಸಾವಿರ ಹಣ ಡ್ರಾ ಆಗಿರುವುದು ಬೆಳಕಿಗೆ ಬಂದಿದೆ.
ಅದಾಗಲೇ ವಿಜಯಾಂಭ ಅವರು ಮೃತಪಟ್ಟಿ 5 ವರ್ಷಗಳು ಆಗಿತ್ತು. ಈ ವೇಳೆ ಕುಟುಂಬಸ್ಥರು ವಿಜಯಾಂಭ ಅವರು ಸಾವನ್ನಪ್ಪಿರುವುದು 2011 ರಲ್ಲಿ ಅವರ ಖಾತೆಯಿಂದ 2015 ರಲ್ಲಿ ಹಣ ಹೇಗೆ ಡ್ರಾ ಆಯ್ತು ಎಂದು ಪ್ರಶ್ನೆ ಮಾಡಿದ್ದಾರೆ.
ಈ ಪ್ರಕರಣ ಬೆಳಕಿಗೆ ಬಂದು ಮೂರು ವರ್ಷಗಳಾಗಿದ್ದು, ಇಲ್ಲಿಯವರೆಗೆ ಯಾವುದೇ ನ್ಯಾಯ ಈ ಕುಟುಂಬಕ್ಕೆ ದೊರೆತಿಲ್ಲ. ವಿಜಯಾಂಭ ಅವರ ಅಳಿಯ ಶಿವಪ್ರಕಾಶ್ ಅಂಚೆ ಇಲಾಖೆಯ ಮುಖ್ಯ ಅಧಿಕಾರಿಗಳಿಗೆ ಪತ್ರ ಬರೆದರೂ ಸಮಸ್ಯೆ ಪರಿಹಾರವಾಗಿಲ್ಲ.
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
This website uses cookies.
Leave a Comment