ಕೆಂಚೇನಹಳ್ಳಿಯ ಪಂಚರತ್ನ ರಥಯಾತ್ರೆಯಲ್ಲಿ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಈ ಬಾರಿ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿನಿಯರಿಗೆ ಉಚಿತ ಎಲೆಕ್ಟ್ರಿಕಲ್ ಮೊಪೆಡ್ ದ್ವಿಚಕ್ರ ವಾಹನ ನೀಡುವುದಾಗಿ ಹೇಳಿದರು.
4 ತಿಂಗಳಿನಿಂದ ಬಿಸಿಲಲ್ಲೇ ಇದ್ದೇನೆ.. ಏನೂ ಆಗಿಲ್ಲ:
ಎರಡು ರಾಷ್ಟ್ರೀಯ ಪಕ್ಷಗಳ ವಿರುದ್ಧ ನಾನು ಏಕಾಂಗಿಯಾಗಿ ಹೋರಾಟ ಮಾಡುತ್ತಿದ್ದೇನೆ. ಎಲೆಕ್ಷನ್ ಕೆಲಸ ಇದ್ದಿದ್ದರಿಂದ ತಡವಾಗಿ ಆಗಮಿಸಿದೆ. ಪಂಚರತ್ನ ಕಾರ್ಯಕ್ರಮಗಳನ್ನು ಜಾರಿಗೆ ತರಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತಿದ್ದೇನೆ ಎಂದರು.
ಇದೇ ವೇಳೆ ಡ್ರೈವರ್ ನೆರಳಿಗೆ ಯಾತ್ರೆಯ ವಾಹನ ನಿಲ್ಲಿಸಲು ಮುಂದಾಗುತ್ತಿದ್ದರು. ಆಗ ಕುಮಾರಸ್ವಾಮಿ ಅವರು ವಾಹನ ನೆರಳಿಗೆ ಹಾಕಬೇಡಿ. ಕಾರ್ಯಕರ್ತರು ಬಿಸಿಲು ಜಾಸ್ತಿ ಇದೆ, ಅಣ್ಣ ಎಂದರು. ಇದಕ್ಕೆ 4 ತಿಂಗಳಿಂದ ಬಿಸಿಲಲ್ಲೇ ಇದ್ದೇನೆ. ಏನೂ ಆಗಲ್ಲ ಎಂದು ಕುಮಾರಸ್ವಾಮಿ ಹೇಳಿದರು.ಇದನ್ನು ಓದಿ –ಇಂದು , ನಾಳೆ ಮೈಸೂರಿಗೆ ಪ್ರಧಾನಿ : ಕಾರ್ಯಕ್ರಮದ ವಿವರ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು