ಮೈಸೂರಿನಲ್ಲಿ ಅರಮನೆ ಆಡಳಿತ ಮಂಡಳಿ ಉದ್ಯೋಗಿಗಳಿಗೆ ಶುಕ್ರವಾರ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ರಾಜವಂಶಸ್ಥರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಚಾಲನೆ ನೀಡಿದರು.
ಅರಮನೆ ಮಂಡಳಿ ಅಧಿಕಾರಿಗಳು, ಸಿಬ್ಬಂದಿ ಸೇರಿ 200 ಜನ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ವಿಶ್ವ ವಿಖ್ಯಾತ ಮೈಸೂರು ದಸರಾ ಹಬ್ಬದ ಹಿನ್ನೆಲೆಯಲ್ಲಿ ಮೈಸೂರಿನ ಕ್ಲಿಯರ್ ಮೆಡಿ ರೇಡಿಯಂಟ್ ಆಸ್ಪತ್ರೆಯು ಈ ಶಿಬಿರವನ್ನು ಆಯೋಜಿಸಿತ್ತು.
ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್. ಸುಬ್ರಮಣ್ಯ, ಕ್ಲಿಯರ್ ಮೆಡಿರೇಡಿಯಂಟ್ ಆಸ್ಪತ್ರೆಯ ಮುಖ್ಯಸ್ಥ ಎ.ಆರ್. ಮಂಜುನಾಥ್, ಆಸ್ಪತ್ರೆ ವೈದ್ಯರು, ಸಿಬ್ಬಂದಿ ಇದ್ದರು.