January 29, 2026

Newsnap Kannada

The World at your finger tips!

KSRTC , UPI , Ticket

ಜೂನ್ 15ರ ವರೆಗೂ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ

Spread the love

ರಾಜ್ಯದಾದ್ಯಂತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಪ್ರಾರಂಭವಾಗಿದ್ದು .ವಿದ್ಯಾರ್ಥಿಗಳ ಶೈಕ್ಷಣಿಕ ತರಗತಿಗಳಿಗೆ ಹಾಜರಾಗಲು ಯಾವುದೇ ಅನಾನುಕೂಲವಾಗದಂತೆ ಕ್ರಮ ಕೈಗೊಂಡು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸುತ್ತೋಲೆಯನ್ನು ಹೊರಡಿಸಿದೆ.

ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾವಾಗಿರುವ ಹಿನ್ನೆಲೆಯಲ್ಲಿ ಕೆಎಸ್​ಆರ್​​ಟಿಸಿ, ವಿದ್ಯಾರ್ಥಿಗಳ ಹಳೆಯ ಬಸ್ ಪಾಸ್ ಅವಧಿ ವಿಸ್ತರಿಸಿದೆ. ಜೂನ್ 15ರ ವರೆಗೂ ಹಳೆಯ ಬಸ್ ಪಾಸ್ ಅವಧಿ ವಿಸ್ತರಣೆ ಮಾಡಿ ಕೆಎಸ್​ಆರ್​​ಟಿಸಿ ಆದೇಶ ಹೊರಡಿಸಿದ್ದು, ಇದು ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಅನ್ವಯವಾಗಲಿದೆ.

ವಿದ್ಯಾರ್ಥಿ ತಮ್ಮ ಈ ಹಿಂದಿನ ವರ್ಷದ ಪಾಸ್​​ ಅಥವಾ ವರ್ಷದ ಶಾಲಾ ಶುಲ್ಕ ರಸೀದಿ ತೋರಿಸಿ ಬಸ್ ಗಳಲ್ಲಿ ಪ್ರಯಾಣ ಮಾಡಬಹುದು ಎಂದು ಕೆಎಸ್​ಆರ್​​ಟಿಸಿ ತನ್ನ ಆದೇಶದಲ್ಲಿ ತಿಳಿಸಿದೆ.

ಕರ್ನಾಟಕ ರಾಜ್ಯ ಸರ್ಕಾರ 2023-24ನೇ ಸಾಲಿನ ವಿದ್ಯಾರ್ಥಿಗಳಿಗೆ ಉಚಿತ ರಿಯಾಯಿತಿ ಬಸ್​​ ಪಾಸುಗಳನ್ನು ಇಡಿಸಿಎಸ್​​​ ಇಲಾಖೆಯ ಸೇವಾಸಿಂಧು ತಂತ್ರಾಂಶದ ಮುಖಾಂತರ ಸಂಪೂರ್ಣ ಯಾಂತ್ರೀಕೃತವಾಗಿ ವಿತರಣೆ ಮಾಡಲು ಕ್ರಮವಹಿಸಿಲಾಗುತ್ತಿದ್ದು, ಇಡಿಸಿಎಸ್​​ ಇಲಾಖೆಯು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.

ಆನ್​ಲೈನ್​​ನಲ್ಲಿ ಅರ್ಜಿ ಸಲ್ಲಿಕೆಗೆ ಹಾಗೂ ಪಾಸು ಪಡೆಯಲು ಕಾಲಾವಕಾಶ ನೀಡಲಾಗುತ್ತದೆ .ಭ್ರಷ್ಟರಿಗೆ ಶಾಕ್: ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ

ವಿದ್ಯಾರ್ಥಿಗಳಿಗೆ ಶೈಕ್ಷಣಿಕೆ ತರಗತಿಗಳಿಗೆ ಹಾಜರಾಗಲು ಯಾವುದೇ ಅನಾನುಕೂಲವಾಗದಂತೆ ಕ್ರಮವಹಿಸಬೇಕೆಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನಿರ್ದೇಶಕರಿಂದ ಸುತ್ತೋಲೆಯಲ್ಲಿ ತಿಳಿಸಿದ್ಧಾರೆ.

error: Content is protected !!