ದೇಹವೆಂಬ ದೇಗುಲದಲ್ಲಿ
ಹೃದಯವೆಂಬ ಹಣತೆ ಬೆಳಗುತಿದೆ,
ಮನಸ್ಸೆಂಬ ಆಳದಲ್ಲಿ
ಆತ್ಮವೆಂಬ ಬೆಳಕು ಪ್ರಜ್ವಲಿಸುತ್ತಿದೆ.
ಜಾತಸ್ಯ ಮರಣಂ ಧ್ರುವಂ…
ಹುಟ್ಟಿದ ಕ್ಷಣದಿಂದ ಸಾವಿನಡೆಗೆ ಸಾಗುವುದೇ ಜೀವನ.
ಈ ನಡುವಿನ ಕಾಲವೇ ನಮ್ಮದು ನಿಮ್ಮದು ಎಲ್ಲರದೂ……
ಸೃಷ್ಟಿಯ ನಿಯಮದಂತೆ,
ಗಂಡು ಹೆಣ್ಣಿನ ಸಮ್ಮಿಲನದಿಂದ,
ತಾಯ ಗರ್ಭದಲ್ಲಿ ಪ್ರಾರಂಭವಾಗುವುದು,
ಮೊದಲ ಉಚ್ವಾಸ –
ಅದೇ ನಮ್ಮ ಆರಂಭ,
ಅದೇ ಎಲ್ಲರ ಸಂಭ್ರಮ.
ಮುಂದೊಮ್ಮೆ…..
ಕೊನೆಯ ನಿಶ್ವಾಸ –
ಅದೇ ನಮ್ಮ ಅಂತ್ಯ,
ಅದೇ ಎಲ್ಲರಿಗೂ ದುಃಖ – ನೋವು.
ಈ ನಡುವಿನ ಬಾಲ್ಯ ಯೌವ್ವನ
ಮುಪ್ಪುಗಳೇ ನಮ್ಮ ಬದುಕು,
ಹೇಗೆಂದು ವರ್ಣಿಸಲಿ ಇದನು,
ಹೇಗೆಂದು ಬಣ್ಣಿಸಲಿ ಇದನು,
ಪದಗಳಿವೆಯೇ ಇದಕೆ ಅರ್ಥಕೊಡಲು,
ನಿಲುಕುವುದೇ ಇದು ಭಾಷೆಗಳಿಗೆ,
ಹೃದಯದ ಬಡಿತ – ರಕ್ತದ ಹರಿವು,
ಮೆದುಳಿನ ಗ್ರಹಿಕೆ – ನರಗಳ ಚಲನೆ,
ಗಾಳಿ ನೀರು ಬೆಳಕಿನ ಶಕ್ತಿ,
ಮಣ್ಣಿನ ಆಶ್ರಯ ಮುನ್ನಡೆಸುವುದು
ಸಾವಿನೆಡೆಗೆ ,
ಅದೇ ಜೀವನ.
ಚರ್ಮದ ಸ್ಪರ್ಶ – ಕಣ್ಣ ನೋಟ,
ಕಿವಿಯ ಆಲಿಸುವಿಕೆ – ಮೂಗಿನ ಗ್ರಹಿಕೆ,
ಹೊರ ಹಾಕುವುದು ಬಾಯಿ,
ಧ್ವನಿಯ ಮೂಲಕ.
ಅದೇ ಜೀವಾ..
ಅದೇ ನಾನು ನಾನು ನಾನು..
ಕೊನೆಗೊಂದು ದಿನ ಆ ನಾನೇ
ಆಗುವುದು ನಿರ್ಜೀವ ಶವ.
ಸೂರ್ಯ – ಚಂದ್ರರ ನಾಡಿನಲ್ಲಿ,
ಸಾಗರದ ತಟದಲ್ಲಿ,
ಭೂತಾಯಿ ಮಡಿಲಲ್ಲಿ,
ಹಗಲು – ರಾತ್ರಿಗಳ ಜೊತೆಯಲ್ಲಿ,
ನೋವು ನಲಿವುಗಳ ಭಾವದಲ್ಲಿ,
ನಿಮ್ಮೆಲ್ಲರ ಹೃದಯದಲ್ಲಿ
ಶಾಶ್ವತವಾಗಿ ನೆಲೆಯಾಗುವಾಸೆ.
ಅದೇ ಬದುಕಿನ ಸಾರ್ಥಕತೆ.
ಅಗಾಧ ಭಾವನೆಗಳ ಅಕ್ಷಯ ಪಾತ್ರೆ ನಮ್ಮ ಮನಸ್ಸು…….
ಕ್ಷಣಕ್ಷಣಕ್ಕೂ ಬದಲಾಗುತ್ತಾ ವಿಶಾಲ ಸಾಗರದ ಅಲೆಗಳಂತೆ ,
ಎತ್ತರದ ಪರ್ವತಗಳ ನೋಟದಂತೆ
ದಟ್ಟ ಕಾನನದ ಮಾಲೆಗಳಂತೆ,
ಅನಂತ ಆಕಾಶದ ಕೌತುಕದಂತೆ,
ಚಲಿಸುತ್ತಲೇ ಇರುತ್ತದೆ.
ಕಾಮ ಕ್ರೋಧ ಲೋಭ ಮೋಹ ಮದ ಮತ್ಸರಗಳು ಇರುವಂತೆ,
ಪ್ರೀತಿ ಪ್ರೇಮ ಕರುಣೆ ಮಮತೆಗಳೆಂಬ ಭಾವಗಳೂ ತುಂಬಿ ತುಳುಕುತ್ತವೆ….
ಇಲ್ಲಿ ನಾವು ಮಾಡಬೇಕಿರುವುದು ಹೆಚ್ಚೇನೂ ಇಲ್ಲ.
ಎಲ್ಲ ಭಾವಗಳಲ್ಲೂ ಸಂಚರಿಸುತ್ತಾ ಪ್ರೀತಿ ಎಂಬ ಭಾವವನ್ನು ಅಪ್ಪಿಕೊಳ್ಳೋಣ…..
ಪ್ರೀತಿ ಎಂಬ ಭಾವದಲ್ಲಿ ಸ್ಥಾಯಿಯಾಗೋಣ.
ಅದೊಂದು ಅದ್ಬುತ ಪ್ರಪಂಚ.
ಬೇರೆ ಎಲ್ಲಾ ಭಾವಗಳಿಗೂ ಅಧಿಪತಿ ಈ ಪ್ರೀತಿ ಎಂಬ ಭಾವ. ಇದು ಎಂದೆಂದಿಗೂ ಮುಗಿಯದ ಅಕ್ಷಯ ಭಾವ.
ನಿಷ್ಕಲ್ಮಶ ಪ್ರೀತಿಗೆ ಯಾವ ಮಿತಿಯೂ ಇಲ್ಲ.
ಹರಿಯಲು ಬಿಡಿ ಪ್ರೀತಿಯನ್ನು….
ಅದು ಮತ್ತಷ್ಟು ವಿಶಾಲವಾಗುತ್ತಾ ಸಾಗುತ್ತದೆ. ನಿರೀಕ್ಷೆಗಳಿಲ್ಲದ ,
ಸ್ವಾರ್ಥವಿಲ್ಲದ ಪ್ರೀತಿ ನಿಮ್ಮನ್ನು ಆಂತರಿಕವಾಗಿ ಎತ್ತರೆತ್ತರಕ್ಕೆ ಕೊಂಡೊಯ್ಯುತ್ತದೆ.
ಪ್ರೀತಿ ಎಂಬ ಭಾವ ಎಲ್ಲಾ ಸಂಬಂದಗಳನ್ನು ಮೀರಿ ಬದುಕನ್ನು ಸಾರ್ಥಕತೆಯತ್ತಾ ಮುನ್ನಡೆಸುತ್ತದೆ.
ಸಾಮಾನ್ಯ ವ್ಯಾವಹಾರಿಕ ಬದುಕಿನಲ್ಲಿ ಇದು ಅತ್ಯಂತ ಕಠಿಣ.
ಆದರೆ,
ಅಸಾಮಾನ್ಯರಾಗಲು ಅಸಾಧ್ಯವಾದುದನ್ನೇ ಸಾಧಿಸಬೇಕಲ್ಲವೇ ?
ಪ್ರಯತ್ನಿಸಿ ಇಂದಿನಿಂದಲೇ..
ನೀವಿರುವ ನೆಲೆಯಲ್ಲಿಯೇ..
ಇದರಿಂದ ಯಾವ ದುಷ್ಪರಿಣಾಮಗಳು ಇಲ್ಲವೆಂಬ ಖಚಿತ ಭರವಸೆ ನೀಡಬಲ್ಲೆ…..
ಪ್ರೀತಿಯನ್ನು ಪ್ರೀತಿಸುತ್ತಾ…….
ನಿಮ್ಮೊಂದಿಗೆ ನಾನು,
ನಿಮ್ಮೊಳಗೆ ನಾನು…….
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
This website uses cookies.
Leave a Comment