ಕ್ಷಣಕ್ಷಣಕ್ಕೂ ಕರೊನಾ ಜತೆ ಒಮಿಕ್ರಾನ್ ಭೀತಿ ಕಾಡುತ್ತಿರುವ ಹಿನ್ನೆಲೆಯಲ್ಲಿ ಕ್ರಿಸ್ಮಸ್ ಮತ್ತು ಹೊಸ ವರ್ಷದ ಆಚರಣೆಗೆ ಕೆಲವೊಂದು ಕಟ್ಟುನಿಟ್ಟಿನ ನಿಯಮ ಮಾಡಲಾಗಿದೆ
ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೆಲವೊಂದು ಮಾಹಿತಿ ನೀಡಿದ್ದಾರೆ.
ತಜ್ಞರ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ನಂತರ ಕ್ರಿಸ್ಮಸ್ ಮತ್ತು ಹೊಸ ವರ್ಷಾಚರಣೆಗೆ ಕೆಲವೊಂದು ಷರತ್ತುಗಳನ್ನು ವಿಧಿಸಿರುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ.
ಡಿಸೆಂಬರ್ 30ರಿಂದ ಜನವರಿ 2ರ ವರೆಗೆ ಈ ನಿಷೇಧ ಚಾಲ್ತಿಯಲ್ಲಿ ಇರುತ್ತದೆ.
1) ಬೆಂಗಳೂರಿನ ಎಂಜಿರಸ್ತೆ ಮತ್ತು ಬ್ರಿಗೆಡ್ ರಸ್ತೆ. ಆದರೆ ಈ ಬಾರಿಯೂ ಕಳೆದ ವರ್ಷದಂತೆ ಸಾಮೂಹಿಕವಾಗಿ ಜನರು ಸೇರುವುದನ್ನು ನಿಷೇಧಿಸಲಾಗಿದೆ.
2) ರಾಜ್ಯದ ಯಾವುದೇ ಭಾಗಗಳಲ್ಲಿ ಹೊಸ ವರ್ಷಕ್ಕೆಂದು ಜನರು ಗುಂಪುಗೂಡುವಂತಿಲ್ಲ.
3) ರೆಸ್ಟೋರೆಂಟ್, ಕ್ಲಬ್ಗಳಲ್ಲಿ ಪಾರ್ಟಿ ಮಾಡುವಂತಿಲ್ಲ.
ಡಿಸ್ಕೋ ಜಾಕಿ (ಡಿಜೆ), ಇತ್ಯಾದಿ ಅಬ್ಬರದ ಸಂಗೀತಗಳಿಗೆ ನಿಷೇಧ ಹೇರಲಾಗಿದೆ.
4)ರೆಸ್ಟೋರೆಂಟ್, ಕ್ಲಬ್ಗಳಲ್ಲಿ ಇರುವ ಕೆಪ್ಯಾಸಿಟಿಗಿಂತ ಶೇ.50ರಷ್ಟು ಮಾತ್ರ ಜನರು ಇರಲು ಅವಕಾಶ ಕಲ್ಪಿಸಲಾಗಿದೆ.ಶೇ.50ಕ್ಕಿಂತ ಹೆಚ್ಚು ಜನರು ಇವುಗಳಲ್ಲಿ ಸೇರುವಂತಿಲ್ಲ
5) ಅಪಾರ್ಟ್ಮೆಂಟ್ಗಳಲ್ಲಿ ಕೂಡ ಸಾಮೂಹಿಕವಾಗಿ ಪಾರ್ಟಿ ಮಾಡುವಂತಿಲ್ಲ, ಡಿಸ್ಕೋ ಜಾಕಿ ಇತ್ಯಾದಿ ಸಂಗೀತ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ. ಇವುಗಳ ಜವಾಬ್ದಾರಿಯನ್ನು ಆಯಾ ಅಪಾರ್ಟ್ಮೆಂಟ್ ಅಸೋಸಿಯೇಷನ್ ನೋಡಿಕೊಳ್ಳಬೇಕು.
6) ಡಿಸೆಂಬರ್ 30ರಿಂದ ಜನವರಿ 2ನೇ ತಾರೀಖಿನವರೆಗೆ ಈ ನಿಷೇಧ ಚಾಲ್ತಿಯಲ್ಲಿ ಇರುತ್ತದೆ. ಆದರೆ 25ರಂದು ಕ್ರಿಸ್ಮಸ್ ಇರುವ ಹಿನ್ನೆಲೆಯಲ್ಲಿ ಅವುಗಳಿಗೂ ಕೆಲವೊಂದು ನಿಯಮ ಮಾಡಲಾಗಿದೆ. ಕ್ರಿಸ್ಮಸ್ ಯಾವುದೇ ಬಹಿರಂಗ ಪಾರ್ಟಿ ಮಾಡುವಂತಿಲ್ಲ.
7) ಕ್ರಿಸ್ಮಸ್ ಸಂದರ್ಭದಲ್ಲಿ ಆಂತರಿಕವಾಗಿ ಪ್ರಾರ್ಥನೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಆದರೆ ಕೋವಿಡ್ನ ಎಲ್ಲಾ ನಿಯಮಗಳನ್ನು ಪಾಲನೆ ಮಾಡಬೇಕು. ಸಾಮಾಜಿಕ ಅಂತರ, ಸೆನಿಟೈಸರ್ ಎಲ್ಲವನ್ನೂ ಕಾಪಾಡಬೇಕು. ಕ್ಲಬ್ಗೆ ಬರುವವರಿಗೆ ಎರಡು ಡೋಸ್ ಲಸಿಕೆ ಕಡ್ಡಾಯ ಮಾಡಲಾಗಿದೆ. ಅಲ್ಲಿರುವ ಸಿಬ್ಬಂದಿಗೆ ಪರೀಕ್ಷೆ ಮಾಡಿಸಬೇಕು.
ಬೆಂಗಳೂರು : 10 ವರ್ಷದ ಬಾಲಕಿಗೆ ಚಾಕ್ಲೆಟ್ ಕೊಡಿಸುವುದಾಗಿ ನಂಬಿಸಿ ಕಾಮುಕನೊಬ್ಬ ಅತ್ಯಾಚಾರ ಎಸೆಗಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ… Read More
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಪ್ಲೆಸ್ ಕ್ಲಬ್… Read More
ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More
ಪ್ರಕರಣದಿಂದ ಸ್ವಾರ್ಥ ರಾಜಕಾರಣಿಗಳಿಗೆ, ಕೆಲ ಮಾಧ್ಯಮಗಳಿಗೆ, ಗಂಜಿ ಗಿರಾಕಿಗಳಿಗೆ ಮಾತ್ರ ಲಾಭ ?! ಬರಗಾಲದಿಂದ ರಾಜ್ಯದಲ್ಲಿ ಆಗಿರುವ ಅನಾಹುತ ,… Read More
ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
This website uses cookies.
Leave a Comment