ಹಾಸನದ ಪ್ರಸಿದ್ಧ ದೇವತೆ ಹಾಸನಾಂಬ ದೇವಸ್ಥಾನ ದರ್ಶನಕ್ಕೆ ಅ . 13 ರಿಂದ 27ರವರೆಗೆ ಭಕ್ತರಿಗೆ ಅವಕಾಶ ಕಲ್ಪಿಸುವ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಅಕ್ಟೋಬರ್ 13 ರಂದು ಮಧ್ಯಾಹ್ನ 12 ಗಂಟೆಗೆ ಸಂಪ್ರದಾಯದಂತೆ ಗರ್ಭಗುಡಿಯ ಬಾಗಿಲುಗಳನ್ನು ತೆರೆಯಲಾಗುವುದು. ಹಾಸನಾಂಬ ದೇವಿಯ ದರ್ಶನ ಪಡೆಯಲು ಸಾರ್ವಜನಿಕರಿಗೆ ಅವಕಾಶ ನೀಡುವ ಮೊದಲು ದೇವಾಲಯವನ್ನು ಸ್ವಚ್ಛಗೊಳಿಸಿ, ಹೊಸ ಬಣ್ಣ ಲೇಪವನ್ನು ನೀಡಲಾಗುವುದು. ಇಡೀ ರಾತ್ರಿ ವಿಶೇಷ ಪೂಜೆ ಮತ್ತು ಹೋಮಗಳು ನಡೆಯಲಿದೆ.ಇದನ್ನು ಓದಿ –ಗ್ರಾ.ಪಂ ಅಧ್ಯಕ್ಷರ ಅಧಿಕಾರ ಮೊಟಕಿಲ್ಲ: ಪ್ರಸ್ತಾವನೆಗೆ ಸಿಎಂ ಬೊಮ್ಮಾಯಿ ತಿರಸ್ಕಾರ
, ಅಕ್ಟೋಬರ್ 13 ರಂದು ಸಾರ್ವಜನಿಕ ದರ್ಶನ ಇರುವುದಿಲ್ಲ. ಅಕ್ಟೋಬರ್ 14 ರಂದು ಬೆಳಿಗ್ಗೆ 6 ಗಂಟೆಗೆ ದೇವಾಲಯವು ಭಕ್ತರಿಗೆ ತನ್ನ ಬಾಗಿಲುಗಳನ್ನು ತೆರೆಯುತ್ತದೆ. ಇದು ಸಂಜೆ 4 ಗಂಟೆಯವರೆಗೆ ತೆರೆದಿರುತ್ತದೆ.
ಅ 15 ರಿಂದ 24 ರವರೆಗೆ ಬೆಳಿಗ್ಗೆ 6 ರಿಂದ ರಾತ್ರಿ 10 ರವರೆಗೆ ಭಕ್ತರಿಗೆ ದೇವಾಲಯವನ್ನು ಪ್ರವೇಶಿಸಲು ಅವಕಾಶ ನೀಡಲಾಗುವುದು.ನೈವೇದ್ಯ ಮತ್ತು ಇತರ ಆಚರಣೆಗಳಿಗೆ ಪ್ರತಿದಿನ ಮಧ್ಯಾಹ್ನ 1 ರಿಂದ 3.30 ರವರೆಗೆ ವಿರಾಮವಿರುತ್ತದೆ ಮತ್ತು ಸಾರ್ವಜನಿಕರಿಗೆ ಅನುಮತಿಸಲಾಗುವುದಿಲ್ಲ.
ಅಕ್ಟೋಬರ್ 25 ರಂದು ಸೂರ್ಯಗ್ರಹಣ ಇರುವುದರಿಂದ, ದೇವಾಲಯಕ್ಕೆ ಯಾವುದೇ ಪ್ರವೇಶವಿರುವುದಿಲ್ಲ. ಅಕ್ಟೋಬರ್ 27 ರಂದು ಮಧ್ಯಾಹ್ನ 12 ಗಂಟೆಗೆ ಸಂಪ್ರದಾಯದಂತೆ ದೇವಾಲಯವನ್ನು ಮುಚ್ಚಲಾಗುವುದು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು