Karnataka

ಇಂದಿನಿಂದ ಜ.30 ರವರೆಗೆ ಮಂಡ್ಯದಲ್ಲಿ ಫಲಪುಷ್ಪ ಪ್ರದರ್ಶನ

ತೋಟಗಾರಿಕೆ ಇಲಾಖೆ, ಜಿಲ್ಲಾ ತೋಟಗಾರಿಕೆ ಸಂಘ ಹಾಗೂ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಜನವರಿ26 ರಿಂದ ಜನವರಿ 30 ರವರೆಗೆ 5 ದಿನಗಳ ಕಾಲ ಜಿಲ್ಲಾ ತೋಟಗಾರಿಕೆ ಇಲಾಖೆಯ ಕಛೇರಿಯ ಆವರಣದಲ್ಲಿ ಆಯೋಜಿಸಲಾಗಿದ್ದ ಫಲಪುಪ್ಪ ಪ್ರದರ್ಶನವನ್ನು ಕಂದಾಯ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಆರ್. ಅಶೋಕ್ ಅವರು ಉದ್ಘಾಟಿಸಿದರು.

ಫಲ ಪುಷ್ಪಪ್ರದರ್ಶನದ ಆರ್ಕಣೆಗಳು :

ವೈವಿದ್ಯಮಯ ಅಲಂಕಾರಿಕ ಹೂಕುಂಡಗಳು ಮತ್ತು ಹೂವಿನ ಪಿರಮಿಡ್ ಗಳ ಜೋಡಣೆ. 25ಕ್ಕೂ ಹೆಚ್ಚು ಬಗೆಯ ವಿವಿಧ ಜಾತಿಯ ಪೆಟೊನಿಯಾ, ಅಂಟಿರೈನಂ, ಸಾಲ್ವಿಯಾ, ಸೆಲೋಶಿಯಾ, ಮಾರಿಗೋಲ್ಡ್, ಜೀನಿಯಾ, ಸೇವಂತಿಗೆ, ಗುಲಾಬಿ, ಪಾಯ್ನಿಸೆಟಿಯಾ ಮತ್ತು ಇತರೆ ವರ್ಣದ 20 ಸಾವಿರಕ್ಕೂ ಹೆಚ್ಚು ಅಲಂಕಾರಿಕ ಹೂ ಕುಂಡಗಳನ್ನು ವಿವಿಧ ವಿನ್ಯಾಸಗಳಲ್ಲಿ ಜೋಡಣೆ ಮಾಡಿ ಪ್ರದರ್ಶಿಸಲಾಗಿದೆ.ಚಿರತೆ ತಪ್ಪಿಸಿಕೊಳ್ಳಲು ಮರವೇರಿದ ಯುವತಿ- ಇಳಿಯುವಾಗ ಬಿದ್ದು ಗಂಭೀರ ಗಾಯ
ಜಿಲ್ಲೆಯ ನೋಂದಾಯಿತ ಬೋನ್ಸಾಯ್ ಕ್ಲಬ್‍ನ ಸದಸ್ಯರುಗಳು ಅಭಿವೃದ್ಧಿಪಡಿಸಿರುವ ವಿವಿಧ ಬಗೆಯ ಫೈಕಸ್ ಮತ್ತು ಇತರೆ ಹಣ್ಣಿನ ಜಾತಿಯ ಬೋನ್ಸಾಯ್ ಗಿಡಗಳ ಪ್ರದರ್ಶನ ನುರಿತ ತರಕಾರಿ ಕೆತ್ತನೆ ತಜ್ಞರಾದ ಹರೀಶ್ ಬ್ರಹ್ಮಾವರ್ ಮತ್ತು ತಂಡದವರಿಂದ ಕಲ್ಲಂಗಡಿ, ಕುಂಬಳ, ಕ್ಯಾರೇಟ್ ಮತ್ತು ಇತರೆ ತರಕಾರಿಗಳಲ್ಲಿ ವಿವಿಧ ಆಕೃತಿಗಳನ್ನು ಕೆತ್ತನೆ ಮಾಡಿ, ಆಲಂಕಾರಿಕವಾಗಿ ಜೋಡಣೆ ಮಾಡಲಾದ ಪ್ರದರ್ಶನ ಸಾರ್ವಜನಿಕರನ್ನು ಸೆಳೆಯುತ್ತಿದೆ.

ವಿವಿಧ ಮಾದರಿಯ ಅಲಂಕಾರಿಕ ಕುಂಡಗಳು ಹಾಗೂ ಗುಲಾಬಿ, ಸೇವಂತಿಗೆ, ಕಾರ್ನೇಶನ್, ಲಿಲ್ಲೀಸ್, ಬರ್ಡ್ ಆಫ್ ಪ್ಯಾರಡೈಸ್, ಜರ್ಬೇರಾ ಮತ್ತು ಇತರೆ ಹೂಗಳನ್ನು ಆಲಂಕಾರಿಕವಾಗಿ ಮತ್ತು ವೈವಿಧ್ಯಮಯವಾಗಿ ಜೋಡಣೆ ಮಾಡಿದ ಪ್ರದರ್ಶನ ನಡೆದಿದೆ.

ರೈತರಿಂದ ಗ್ರಾಹಕರಿಗೆ ನೇರ ಮಾರಾಟ: ರೈತರಿಂದ ಗ್ರಾಹಕರಿಗೆ ನೇರ ಮಾರಾಟ ಶೀರ್ಷಿಕೆಯಡಿ ಕೃಷಿ ಇಲಾಖೆ ಆತ್ಮ ಯೋಜನೆ ಹಾಗೂ ವಿಕಸನ ಸಂಸ್ಥೆಯವರ ಸಹಯೋಗದೊಂದಿಗೆ ಜಿಲ್ಲೆಯ ರೈತ ಉತ್ಪಾದಕರ ಕಂಪನಿಗಳು ಅಭಿವೃದ್ಧಿಪಡಿಸಿದ ಬ್ರಾಂಡ್ ಗಳನ್ನು ಜಿಲ್ಲೆಯ ಗ್ರಾಹಕರಿಗೆ ಪರಿಚಯಿಸುವ ದೃಷ್ಠಿಯಿಂದ ರೈತ ಉತ್ಪಾದಕ ಕಂಪನಿಗಳ ಬೆಲ್ಲ, ರಾಗಿ, ಅಕ್ಕಿ ಮತ್ತು ಇತರೆ ಉತ್ಪನ್ನಗಳ ರಿಟೇಲ್ ಬ್ರಾಂಡ್ ಮೇಳವನ್ನು ಆಯೋಜಿಸಲಾಗಿದೆ.
ಪ್ರದರ್ಶನ ಮಳಿಗೆಗಳು:
ಕೌಶಲ್ಯಾಭಿವೃದ್ಧಿ ಮತ್ತು ಖಾದಿ ಮತ್ತು ಗ್ರಾಮೋದ್ಯೋಗ ಇಲಾಖೆಯ ಸ್ವಸಹಾಯ ಗುಂಪುಗಳು ಹಾಗೂ ನಲ್ಮ್ ಯೋಜನೆಯಡಿ ನುರಿತ ಕೌಶಲ್ಯಾಭಿವೃದ್ಧಿ ತರಬೇತಿ ಪಡೆದ ಸದಸ್ಯರುಗಳು ಅಭಿವೃದ್ಧಿಪಡಿಸಿದ ವಿವಿಧ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಮಳಿಗೆಗಳನ್ನು ತೆರೆಯಲಾಗಿದೆ.
ಕೃಷಿ ಇಲಾಖೆ ವತಿಯಿಂದ ಸಿರಿಧಾನ್ಯ ಮೇಳ, ಕಬ್ಬಿನ ಬೇಸಾಯ ಹಾಗೂ ಸಮಗ್ರ ಕೃಷಿ ಪದ್ಧತಿ ಕುರಿತು ಪ್ರಾತ್ಯಕ್ಷಿಕೆ,.ಮೀನುಗಾರಿಕೆ ಇಲಾಖೆಯಿಂದ ವಿವಿಧ ಅಲಂಕಾರಿಕ ಮೀನುಗಳ ಪ್ರದರ್ಶನವನ್ನು ಏರ್ಪಡಿಸಲಾಗಿದೆ .

ಕಾರ್ಯಕ್ರಮದಲ್ಲಿ ಶಾಸಕ ಎಂ.ಶ್ರೀನಿವಾಸ್, ಮಂಡ್ಯ ನಗರಸಭೆ ಅಧ್ಯಕ್ಷ ಹೆಚ್.ಎಸ್. ಮಂಜು ಜಿಲ್ಲಾಧಿಕಾರಿ ಡಾ: ಹೆಚ್.ಎನ್ ಗೋಪಾಲಕೃಷ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Team Newsnap
Leave a Comment

Recent Posts

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024