ಬೆಂಗಳೂರಿನ ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿ ಶೃತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಡಿವಾಳ ಬಳಿ ಅಪಾರ್ಟ್ಮೆಂಟ್ವೊಂದರಲ್ಲಿ ಈ ಪ್ರಕರಣ ನಡೆದಿದೆ, ಸ್ಥಳದಲ್ಲಿ ಡೆತ್ನೋಟ್ ಕೂಡ ಪತ್ತೆಯಾಗಿದೆ. ಅದರಲ್ಲಿ ಕ್ಷಮೆಯನ್ನೂ ಕೋರಲಾಗಿದೆ.ಇದನ್ನು ಓದಿ –ಕುಂಭಮೇಳ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಿ – ಅಧಿಕಾರಿಗಳಿಗೆ ಡಿಸಿ ಅಶ್ವತಿ ಸೂಚನೆ
ಎಫ್ಎಸ್ಎಲ್ ಅಧಿಕಾರಿ ಶ್ರುತಿ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಈಕೆ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಅಪಾರ್ಟ್ಮೆಂಟ್ನಲ್ಲಿ ನೇಣು ಬಿಗಿದುಕೊಂಡಿದ್ದರು. ಎರಡು ದಿನಗಳ ಹಿಂದೆ ಈ ಘಟನೆ ನಡೆದಿದೆ, ತಡವಾಗಿ ಬೆಳಕಿಗೆ ಬಂದಿದೆ.
ಈಕೆ ಇತ್ತೀಚೆಗೆ ವಿಚ್ಛೇದನ ಪಡೆದು ಪತಿಯಿಂದ ದೂರವಿದ್ದರು. ಆದರೆ ತನ್ನನ್ನು ಕ್ಷಮಿಸುವಂತೆ ಡೆತ್ನೋಟ್ ಮೂಲಕ ವಿಚ್ಛೇದಿತ ಪತಿಯಲ್ಲಿ ಕೋರಿಕೊಂಡಿದ್ದಾರೆ. ಜೊತೆಗೆ ಪಾಲಕರಲ್ಲೂ ಕ್ಷಮೆ ಕೋರಿದ್ದಾರೆ. ಅಲ್ಲದೆ ನನ್ನ ಸಾವಿಗೆ ನಾನೇ ಕಾರಣ ಎಂದೂ ಬರೆದುಕೊಂಡಿದ್ದಾರೆ.
ಈಕೆ ವಿಚ್ಛೇದನದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ
- ಇಂದು ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ