ಸೋಮವಾರದಿಂದ ಮತ್ತೆ ನಾಲ್ಕು ದಿನಗಳ ಕಾಲ ಮಂಡ್ಯ ಕಂಪ್ಲೀಟ್ ಲಾಕ್ ಮಾಡಲು ಜಿಲ್ಲಾಧಿಕಾರಿ ಅಶ್ವಥಿ ಆದೇಶ ಹೊರಡಿಸಿದ್ದಾರೆ.
ಕರೋನಾ ನಿಯಂತ್ರಣಕ್ಕಾಗಿ ಸಂಪೂರ್ಣ ಲಾಕ್ ಡೌನ್ ಅನ್ನು ಮೇ 31, ಜೂನ್ 1, 3, 4 ರಂದು ನಾಲ್ಕು ದಿನ ವಿಸ್ತರಿಸಲಾಗಿದೆ.
ನಾಲ್ಕು ದಿನಗಳು ಪೂರ್ತಿ ಬ್ಯಾಂಕ್ ವ್ಯವಹಾರವೂ ಇಲ್ಲ. ಈ ನಾಲ್ಕು ದಿನಗಳಲ್ಲಿ ಹಾಲಿನ ಬೂತ್, ನ್ಯಾಯ ಬೆಲೆ ಅಂಗಡಿ ಹಾಗೂ ಕೃಷಿ ಚಟುವಟಿಕೆಗಳಿಗೆ ಪೂರಕ ಅಂಗಡಿಗಳಿಗೆ ಮಾತ್ರ ಅವಕಾಶ. ಉಳಿದಂತೆ ಎಲ್ಲವೂ ಸ್ತಬ್ಧ. ದಿನಸಿ, ತರಕಾರಿ ಖರೀದಿಗೂ ಅವಕಾಶ ಇಲ್ಲ. ಹೋಟೆಲ್ ಗಳು, ಮದ್ಯದಂಗಡಿ ಸಂಪೂರ್ಣ ಬಂದ್ ಆಗಿರುತ್ತವೆ.