ಜಿ.ಬಿ.ಸರಗೂರು ಸರ್ಕಾರಿ ಪ್ರೌಢಶಾಲೆ ಪ್ರತಿಭೆಗಳು ರಾಷ್ಟ್ರೀಯ ಕಲೋತ್ಸವದಲ್ಲಿ ಪಾಲ್ಗೊಳ್ಳುವ ಅವಕಾಶ

Team Newsnap
2 Min Read

ಜನವರಿ 15ರಿಂದ ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಕಲೋತ್ಸವ ಸ್ಪರ್ಧೆಗೆ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲ್ಲೂಕಿನ ಜಿ.ಬಿ.ಸರಗೂರು ಸರ್ಕಾರಿ ಪ್ರೌಢಶಾಲೆಯ ಇಬ್ಬರು ಬಾಲಕಿಯರು ಆಯ್ಕೆಯಾಗಿದ್ದಾರೆ.

kale1

ಶಾಲೆಯ ಚಿತ್ರಕಲಾ ಶಿಕ್ಷಕಿ ಕೆ. ಸಂಗೀತಾ ಈ ವಿಷಯ ತಿಳಿಸಿದ್ದು,
ಶಿಕ್ಷಣದಲ್ಲಿ ಕಲೆಗಳನ್ನು ಉತ್ತೇಜಿಸಿ, ಪೋಷಿಸುವ ಮೂಲಕ ದೇಶದ ಶ್ರೀಮಂತ ಸಾಂಸ್ಕøತಿಕ ಪರಂಪರೆಯನ್ನು ಮತ್ತು ಅದರ ವೈವಿಧ್ಯತೆಯ ಅರಿವನ್ನು ಶಾಲಾ ಮಕ್ಕಳಿಗೆ ಮೂಡಿಸಲು ಭಾರತ ಸರ್ಕಾರದ ಶಾಲಾ ಶಿಕ್ಷಣ ಸಚಿವಾಲಯದ ವತಿಯಿಂದ ಆಯೋಜಿಸಿದ್ದಾರೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಮಟ್ಟದ ‘ಕಲೋತ್ಸವ’ ಸ್ಪರ್ಧೆಗೆ ಕರ್ನಾಟಕ ಸರ್ಕಾರ 18 ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಈ ಪೈಕಿ ದೃಶ್ಯಕಲೆ ವಿಭಾಗದಲ್ಲಿ ಒಟ್ಟು 6 ಮಕ್ಕಳು ಆಯ್ಕೆ ಆಗಿದ್ದಾರೆ. ಅದರಲ್ಲಿ ಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ಐಶ್ವರ್ಯ ಜಿ. ಅವರು 3ಡಿ ಸ್ಪರ್ಧೆಯಲ್ಲಿ ಹಾಗೂ 9ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ಚಂದನ ಎ. ಸ್ಥಳೀಯ ಆಟಿಕೆಗಳು ಮತ್ತು ಆಟಗಳ ಸ್ಪರ್ಧೆಯಲ್ಲಿ ಆಯ್ಕೆಯಾಗಿ ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.

ಐಶ್ವರ್ಯ ಜಿ. ಅವರು 3ಡಿ ಸ್ಪರ್ಧೆಯಲ್ಲಿ ಮಣ್ಣಿನಿಂದ ಹುಲಿ ವಾಹನದಲ್ಲಿ ಕುಳಿತ ಶ್ರೀಚಾಮುಂಡೇಶ್ವರಿ ದೇವಿಯ ಮೂರ್ತಿಯನ್ನು ರಚಿಸಿದ್ದಾಳೆ. ಚಂದನ ಎ. ಅವರು ಸೋರೆಕಾಯಿಯ ಮೇಲೆ ಮೂಡಿಸಿದ ವರ್ಣಚಿತ್ರಕಲೆಗಾಗಿ ಆಯ್ಕೆಯಾಗಿದ್ದಾರೆ.

ರಾಷ್ಟ್ರೀಯ ಕಲೋತ್ಸವವು 2015ರಿಂದ ಪ್ರತಿವರ್ಷ ನವದೆಹಲಿಯಲ್ಲಿ ನಡೆಯುತ್ತದೆ. ಒಟ್ಟು 9 ಪ್ರಕಾರದ ಸ್ಪರ್ಧೆಗಳಿರುತ್ತವೆ. ಜಿಲ್ಲಾ ಮಟ್ಟದಲ್ಲಿ ನಡೆದ ಸ್ಪರ್ಧೆಯಲ್ಲಿ ಆಯ್ಕೆಯಾಗಿ, ರಾಜ್ಯಮಟ್ಟದಲ್ಲಿ ಪ್ರದರ್ಶನ ನೀಡಬೇಕು. ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಮೊದಲ ಸ್ಥಾನ ಪಡೆದ ಮಕ್ಕಳನ್ನು ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆ ಮಾಡಲಾಗುತ್ತದೆ.
ನಶಿಸುತ್ತಿರುವ ಕಲೆಗಳನ್ನು ಉಳಿಸುವ ಪ್ರಯತ್ನ ಇದಾಗಿದೆ.

ಚಂದನ ಎ. ಸೋರೆಕಾಯಿ ಬಳಸಿ ಚನ್ನಪಟ್ಟಣದ ಗೊಂಬೆ ಮಾದರಿಯ ಗೊಂಬೆ ಮಾಡಿದ್ದಾರೆ .ಮಣ್ಣಿನ ಪಾತ್ರೆಗಳನ್ನು ವಿಗ್ರಹಗಳನ್ನು ಹಿಂದಿನಿಂದಲೂ ಮಾಡಲಾಗುತ್ತಿತ್ತು. ಈಗ ಆ ಕಲೆ ಮಾಯವಾಗುತ್ತಿದೆ. ನಮ್ಮ ವಿದ್ಯಾರ್ಥಿ ಐಶ್ವರ್ಯ ಜಿ. ಅವರು ಹುಲಿವಾಹನದಲ್ಲಿ ಶ್ರೀಚಾಮುಂಡೇಶ್ವರಿ ಮೂರ್ತಿಯನ್ನು ಮಣ್ಣಿನಿಂದ ಮಾಡಿದ್ದಾರೆ. ಶ್ರೀಚಾಮುಂಡೇಶ್ವರಿ ಮೈಸೂರು ಜಿಲ್ಲೆಯ ಪ್ರತೀಕ. ಹಾಗಾಗಿ ಈ ವಿಷಯವನ್ನು ಆಯ್ಕೆ ಮಾಡಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

ಇದೇ ಮೊದಲು‌ ರಾಷ್ಟ್ರೀಯ ಸ್ಪರ್ಧೆ:

ನಮ್ಮ ಶಾಲೆಯ ಚಿತ್ರಕಲಾ ಶಿಕ್ಷಕಿ ಸಂಗೀತಾ ಕೆ. ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಕಲಾಭ್ಯಾಸ ಮಾಡಿ, ಈ ಸಾಧನೆ ಮಾಡಿದ್ದಾರೆ. ಪ್ರತಿ ವರ್ಷ ನಮ್ಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾಗಿ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ, ತಮ್ಮ ಪ್ರತಿಭೆ ಪ್ರದರ್ಶನ ನೀಡಿದ್ದಾರೆ. ಇದೇ ಮೊದಲ ಬಾರಿಗೆ ರಾಷ್ಟ್ರೀಯ ಮಟ್ಟಕ್ಕೆ ಕರ್ನಾಟಕದಿಂದ ಆಯ್ಕೆಯಾದ ಮಕ್ಕಳ ಪೈಕಿ ನಮ್ಮ ಶಾಲೆಯ ಇಬ್ಬರು ಮಕ್ಕಳು ಆಯ್ಕೆಯಾಗಿರುವುದಕ್ಕೆ ಖುಷಿಯಾಗುತ್ತಿದೆ ಎಂದು ಶಾಲೆಯ ಮುಖ್ಯಶಿಕ್ಷಕ ಜಿ.ಹೆಚ್. ಮಲ್ಲೇಶ್ ತಿಳಿಸಿದ್ದಾರೆ.

Share This Article
Leave a comment