Trending

ವಿಮರ್ಶಕ ಅಮೂರ ವಿಧಿವಶ

ಖ್ಯಾತ ವಿಮರ್ಶಕ, ಚಿಂತಕ ಡಾ. ಜಿ.ಎಸ್. ಅಮೂರ ಎಂದೇ ಪ್ರಖ್ಯಾತರಾಗಿರುವ ಗುರುರಾಜ ಶ್ಯಾಮಾಚಾರ ಆಮೂರರು ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ಬೆಳಗಿನ ಜಾವ 5 ಗಂಟೆಗೆ ನಿಧನರಾದರು.

ವಯೋಸಹಜ‌ ಖಾಯಿಲೆಯಿಂದ ಬಳಲುತಿದ್ದ ಅಮೂರ ಬೆಂಗಳೂರಿನ ಮಗನ ಮನೆಯಲ್ಲಿ ಇದ್ದರು.

ಅಮೂರರ ಅಗಲಿಕೆಯಿಂದ ಕನ್ನಡ ಸಾಹಿತ್ಯ ಕ್ಷೇತ್ರ ಬಡವಾಗಿದೆ. ಅಮೂರರು ಕನ್ನಡದ ಖ್ಯಾತ ವಿಮರ್ಶಾಕಾರರು.

ಧಾರವಾಡ ಜಿಲ್ಲೆಯ ಹಾನಗಲ್ ತಾಲೂಕಿನ‌ ಬೊಮ್ಮನಹಳ್ಳಿಯಲ್ಲಿ ಜನಿಸಿದ್ದ ಅಮೂರರ ಪ್ರಾಥಮಿಕ ಹಾಗೂ ಮಾಧ್ಯಮಿಕ ಶಿಕ್ಷಣ ಹಾವೇರಿಯಲ್ಲಾಯ್ತು. ಮುಂಬೈನಲ್ಲಿ 1942 ರಲ್ಲಿ ಮೆಟ್ರಿಕ್‌ ಪೂರೈಸಿ‌ ನಂತರ ಬಿಎ ಆನರ್ಸ್ ಪದವಿ ಹಾಗೂ ಮುಂಬೈ ವಿಶ್ವವಿದ್ಯಾಲಯದಿಂದ ಎಂ.ಎ ಪದವಿ‌ ಪಡೆದರು. ತರುವಾಯ ಗದಗಿನ ತೋಂಟದಾರ್ಯ ಕಾಲೇಜಿನಲ್ಲಿ ಆಂಗ್ಲ ಪ್ರಾಧ್ಯಾಪಕರಾದರು.

ಕೃತಿ ಪರೀಕ್ಷೆ, ದ.ರಾ. ಬೇಂದ್ರೆ, ಅ.ನ. ಕೃಷ್ಣರಾಯ, ಭುವನ ಭಾಗ್ಯ, ಕನ್ನಡ ಕಥನ ಸಾಹಿತ್ಯ, ಮುಂತಾದ‌ವು ಅವರಿಗೆ ಹೆಸರು ತಂದು ಕೊಟ್ಟ ವಿಮರ್ಶಾ ಕೃತಿಗಳು.

1996 ರಲ್ಲಿ ಇವರ ಭುವನ ಭಾಗ್ಯ ಕೃತಿಗೆ ‘ಕೇಂದ್ರ ಸಾಹಿತ್ಯ ಅಕಾಡೆಮಿ’ ಪ್ರಶಸ್ತಿ, 1999ರಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಕೋಲ್ಕತ್ತದವರು ಕೊಡಮಾಡುವ ಭಾರತೀಯ ಭಾಷಾ ಪರಿಷತ್ ಪ್ರಶಸ್ತಿ ಜೊತೆ ಇನ್ನೂ ಅನೇಕ ಪ್ರಶಸ್ತಿಗಳು ಇವರ ಮುಡಿಗೇರಿವೆ

ಅಮೂರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ ಮುಂತಾದವರು ಸಂತಾಪ ಸೂಚಿಸಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024

ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More

May 16, 2024

ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್‌ಐಎ

ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)… Read More

May 15, 2024

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ

ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More

May 15, 2024

ಪಾಕ್ ಆಕ್ರಮಿತ ಕಾಶ್ಮೀರ ಭಾರತಕ್ಕೆ ಸೇರಿದ್ದು : ಅಮಿತ್‌ ಶಾ

ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಷಾ ಬುಧವಾರ ಪಾಕ್ ಆಕ್ರಮಿತ ಕಾಶ್ಮೀರ (POK) ಮೇಲೆ ಭಾರತದ ಸಾರ್ವಭೌಮತ್ವವನ್ನು… Read More

May 15, 2024