ದೆಹಲಿಯ ಕೋರ್ಟ್ ಆವರಣದಲ್ಲೇ ಶೂಟ್ಔಟ್ : ಗ್ಯಾಂಗ್ ಸ್ಟರ್ ಜಿತೇಂದ್ರ ಸೇರಿ ನಾಲ್ವರ ಬಲಿ‌

Team Newsnap
0 Min Read

ದೆಹಲಿಯ ರೋಹಿಣಿ ಕೋರ್ಟ್ ಆವರಣದಲ್ಲಿ ನಡೆದ ಗ್ಯಾಂಗ್ ವಾರ್ ನಲ್ಲಿ, ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.

ಈ ಗುಂಡಿನ ದಾಳಿಯಲ್ಲಿ ಗ್ಯಾಂಗ್ ಸ್ಟರ್ ಜಿತೇಂದ್ರ ಯೋಗಿ ಸೇರಿ ನಾಲ್ವರು ಸಾವನ್ನಪ್ಪಿದ್ದು, 6 ಜನ ಗಾಯಗೊಂಡಿದ್ದಾರೆ.‌
ಹರಿಯಾಣ ಮೂಲದಗ್ಯಾಂಗ್ ಸ್ಟರ್ ಜಿತೇಂದ್ರ ಯೋಗಿ ಎಂಬಾತನನ್ನು ಇಂದು ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದರು.
ರೂಂ ನಂಬರ್ 207ರಲ್ಲಿ ನ್ಯಾಯಾಧೀಶರ ಮುಂದೆ ವಿಚಾರಣೆ ನಡೆಯುತ್ತಿತ್ತು. ಈ ವೇಳೆ ವಕೀಲರ ವೇಷದಲ್ಲಿ ಬಂದ ಹಂತಕರು ಜಿತೇಂದ್ರ ಯೋಗಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಈ ವೇಳೆ ಪೊಲೀಸರು ಇಬ್ಬರು ಹಂತಕರ ಮೇಲೆ ಫೈರಿಂಗ್ ಮಾಡಿ ಇಬ್ಬರನ್ನು ಹೊಡೆದುರುಳಿಸಿದ್ದಾರೆ.

Share This Article
Leave a comment