ಗಾಂಜಾ ಮಾರಾಟ ದಂಧೆಗೆ ಮಕ್ಕಳನ್ನು ಬಳಸಿಕೊಳ್ಳುತ್ತಿದ್ದ ತಾಯಿಯನ್ನು ಬೆಂಗಳೂರಿನ ಕಲಾಸಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.
ನಗ್ಮಾ ಬಂಧಿತ ಆರೋಪಿ. ಗಾಂಜಾ ದಂಧೆಯನ್ನು ನಡೆಸುತ್ತಿದ್ದ ಪತಿಯನ್ನು 6 ತಿಂಗಳ ಹಿಂದಷ್ಟೇ ಜೆ.ಜೆ ನಗರ ಪೊಲೀಸರು ಬಂಧಿಸಿ ಜೈಲಿಗೆ ಕಳಿಸಿದ್ದರು.
ಗಂಡನ ದಂಧೆ ಬಗ್ಗೆ ಅರಿತಿದ್ದ ಪತ್ನಿ ನಗ್ಮಾ ಪತಿಯ ಗಾಂಜಾ ದಂಧೆಯನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಳು.
ದೂರದ ವಿಶಾಖಪಟ್ಟಣದಿಂದ ಗಾಂಜಾ ತಂದು ದುಪ್ಪಟ್ಟು ಹಣಕ್ಕೆ ನಗ್ಮಾ ಮಾರಾಟ ಮಾಡಿ ಹಣ ಮಾಡುತ್ತಿದ್ದಳು.
ನಗ್ಮಾಳ ಗಾಂಜಾ ದಂಧೆಯ ಮಾಹಿತಿ ತಿಳಿದ ಪೊಲೀಸರು ನಗ್ಮಾಳನ್ನು ಬಂಧಿಸಿ ಜೈಲಿಗೆ ಕಳಿಸಿದ್ದಾರೆ. ಅಲ್ಲಿಗೆ ಗಾಂಜಾ ದಂಧೆಯ ರೂವಾರಿಗಾಳಾದ ದಂಪತಿ ಜೈಲು ಸೇರಿದ್ದಾರೆ.
ವಿಶಾಖಪಟ್ಟಣದಿಂದ ಗಾಂಜಾ ತರಲು ನಗ್ಮಾ ಮಕ್ಕಳನ್ನು ಬಳಸಿಕೊಳ್ಳುತ್ತಿದ್ದಳು. ಪೊಲೀಸರಿಂದ ತಪ್ಪಿಸಿಕೊಳ್ಳಲು ಮಕ್ಕಳನ್ನು ಗಾಂಜಾ ದಂಧೆಗೆ ಬಳಸಿಕೊಳ್ಳುತ್ತಿದ್ದಳು.
ಸಾಮಾನ್ಯವಾಗಿ ರೈಲಿನಲ್ಲಿ ಮಕ್ಕಳ ಬ್ಯಾಗ್ಗಳನ್ನು ಪೊಲೀಸರು ತಪಾಸಣೆ ಮಾಡುತ್ತಿರಲಿಲ್ಲ. ಇದನ್ನು ಬಂಡವಾಳ ಮಾಡಿಕೊಂಡಿದ್ದ ನಗ್ಮಾ ಕುಟುಂಬ ಸಮೇತವಾಗಿ ವಿಶಾಖಪಟ್ಟಣಂಗೆ ಹೋಗಿ ಒಂದು ದಿನ ಸ್ಟೇ ಆಗಿ ಕುಟುಂಬದೊಂದಿಗೆ ಮನೆಗೆ ಬರುತ್ತಿದ್ದಳು.
ವಿಶಾಖಪಟ್ಟಣದಿಂದ ಮಾರ್ಚ್ 20ರಂದು ಗಾಂಜಾ ತಂದಿದ್ದ ನಗ್ಮಾ ಕಲಾಸಿಪಾಳ್ಯ ಕಾರ್ನೇಷಲ್ ಸರ್ಕಲ್ನಲ್ಲಿ ನಿಂತಿದ್ದಳು. ಈ ವೇಳೆ ಕಲಾಸಿಪಾಳ್ಯ ಪೊಲೀಸರ ಕೈಗೆ ಲಾಕ್ ಆಗಿದ್ದಾಳೆ. ನಗ್ಮಾಳನ್ನು ಬಂಧಿಸಿರುವ ಪೊಲೀಸರು, ಆಕೆಯಿಂದ 13 ಲಕ್ಷ ಮೌಲ್ಯದ 26 ಕೆ.ಜಿ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ.
ಸದ್ಯ ಗಂಡ ಹೆಂಡತಿ ಇಬ್ಬರು ಗಾಂಜಾ ಕೇಸ್ನಲ್ಲಿ ಜೈಲು ಸೇರಿದ್ದು, ಮಕ್ಕಳು ಅಜ್ಜಿ ಜೊತೆ ಇದ್ದಾರೆ.ಇದನ್ನು ಓದಿ –ಶಾಸಕ ಮಾಡಾಳು ವಿರೂಪಾಕ್ಷಪ್ಪ 5 ದಿನ ಲೋಕಾಯುಕ್ತ ವಶಕ್ಕೆ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು