ನಗ್ಮಾ ಬಂಧಿತ ಆರೋಪಿ. ಗಾಂಜಾ ದಂಧೆಯನ್ನು ನಡೆಸುತ್ತಿದ್ದ ಪತಿಯನ್ನು 6 ತಿಂಗಳ ಹಿಂದಷ್ಟೇ ಜೆ.ಜೆ ನಗರ ಪೊಲೀಸರು ಬಂಧಿಸಿ ಜೈಲಿಗೆ ಕಳಿಸಿದ್ದರು.
ಗಂಡನ ದಂಧೆ ಬಗ್ಗೆ ಅರಿತಿದ್ದ ಪತ್ನಿ ನಗ್ಮಾ ಪತಿಯ ಗಾಂಜಾ ದಂಧೆಯನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಳು.
ದೂರದ ವಿಶಾಖಪಟ್ಟಣದಿಂದ ಗಾಂಜಾ ತಂದು ದುಪ್ಪಟ್ಟು ಹಣಕ್ಕೆ ನಗ್ಮಾ ಮಾರಾಟ ಮಾಡಿ ಹಣ ಮಾಡುತ್ತಿದ್ದಳು.
ನಗ್ಮಾಳ ಗಾಂಜಾ ದಂಧೆಯ ಮಾಹಿತಿ ತಿಳಿದ ಪೊಲೀಸರು ನಗ್ಮಾಳನ್ನು ಬಂಧಿಸಿ ಜೈಲಿಗೆ ಕಳಿಸಿದ್ದಾರೆ. ಅಲ್ಲಿಗೆ ಗಾಂಜಾ ದಂಧೆಯ ರೂವಾರಿಗಾಳಾದ ದಂಪತಿ ಜೈಲು ಸೇರಿದ್ದಾರೆ.
ವಿಶಾಖಪಟ್ಟಣದಿಂದ ಗಾಂಜಾ ತರಲು ನಗ್ಮಾ ಮಕ್ಕಳನ್ನು ಬಳಸಿಕೊಳ್ಳುತ್ತಿದ್ದಳು. ಪೊಲೀಸರಿಂದ ತಪ್ಪಿಸಿಕೊಳ್ಳಲು ಮಕ್ಕಳನ್ನು ಗಾಂಜಾ ದಂಧೆಗೆ ಬಳಸಿಕೊಳ್ಳುತ್ತಿದ್ದಳು.
ಸಾಮಾನ್ಯವಾಗಿ ರೈಲಿನಲ್ಲಿ ಮಕ್ಕಳ ಬ್ಯಾಗ್ಗಳನ್ನು ಪೊಲೀಸರು ತಪಾಸಣೆ ಮಾಡುತ್ತಿರಲಿಲ್ಲ. ಇದನ್ನು ಬಂಡವಾಳ ಮಾಡಿಕೊಂಡಿದ್ದ ನಗ್ಮಾ ಕುಟುಂಬ ಸಮೇತವಾಗಿ ವಿಶಾಖಪಟ್ಟಣಂಗೆ ಹೋಗಿ ಒಂದು ದಿನ ಸ್ಟೇ ಆಗಿ ಕುಟುಂಬದೊಂದಿಗೆ ಮನೆಗೆ ಬರುತ್ತಿದ್ದಳು.
ವಿಶಾಖಪಟ್ಟಣದಿಂದ ಮಾರ್ಚ್ 20ರಂದು ಗಾಂಜಾ ತಂದಿದ್ದ ನಗ್ಮಾ ಕಲಾಸಿಪಾಳ್ಯ ಕಾರ್ನೇಷಲ್ ಸರ್ಕಲ್ನಲ್ಲಿ ನಿಂತಿದ್ದಳು. ಈ ವೇಳೆ ಕಲಾಸಿಪಾಳ್ಯ ಪೊಲೀಸರ ಕೈಗೆ ಲಾಕ್ ಆಗಿದ್ದಾಳೆ. ನಗ್ಮಾಳನ್ನು ಬಂಧಿಸಿರುವ ಪೊಲೀಸರು, ಆಕೆಯಿಂದ 13 ಲಕ್ಷ ಮೌಲ್ಯದ 26 ಕೆ.ಜಿ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ.
ಸದ್ಯ ಗಂಡ ಹೆಂಡತಿ ಇಬ್ಬರು ಗಾಂಜಾ ಕೇಸ್ನಲ್ಲಿ ಜೈಲು ಸೇರಿದ್ದು, ಮಕ್ಕಳು ಅಜ್ಜಿ ಜೊತೆ ಇದ್ದಾರೆ.ಇದನ್ನು ಓದಿ –ಶಾಸಕ ಮಾಡಾಳು ವಿರೂಪಾಕ್ಷಪ್ಪ 5 ದಿನ ಲೋಕಾಯುಕ್ತ ವಶಕ್ಕೆ
ಮೈಸೂರು : ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ಮಗಳು ಪ್ರತಿಮಾ ಪ್ರಸಾದ್… Read More
ಮೈಸೂರು : ಉದಯಗಿರಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
This website uses cookies.
Leave a Comment