ನಿನ್ನೆ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ವಿಧಿವಶರಾದ ಗಾನ ಗಾರುಡಿಗ ಎಸ್ಪಿ ಬಾಲಸುಬ್ರಹ್ಮಣ್ಯಂ ಅಂತ್ಯ ಕ್ರಿಯೆ
ಚೆನ್ನೈನಲ್ಲಿರುವ ಫಾರ್ಮ್ ಹೌಸ್ನಲ್ಲಿ ಪುತ್ರ ಚರಣ್ ನೆರವೇರಿಸಿದರು.
ಸಹಸ್ರಾರು ಅಭಿಮಾನಿಗಳ ಅಶ್ರುತರ್ಪಣ ನಡುವೆ ಬಾಲು ಮಣ್ಣಿನಲ್ಲಿ ಲೀನವಾದರು.
ಕೊರೋನಾ ಸೋಂಕು ಧೃಡಪಟ್ಟ ಹಿನ್ನೆಲೆಯಲ್ಲಿ ಎಸ್ಪಿಬಿ ಆಗಸ್ಟ್ 5 ರಂದು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅವರು ಗುಣಮುಖರಾಗದೇ ನಿನ್ನೆ ಮಧ್ಯಾಹ್ನ ವಿಧಿವಶರಾದರು.
ಎಸ್ ಪಿಬಿಯರವರ ನಿಧನದ ಸುದ್ದಿ ಚಿತ್ರರಂಗಕ್ಕೆ ದೊಡ್ಡ ನಷ್ಟ. ಅವರ ಆತ್ಮಕ್ಕೆ ಪ್ರಧಾನಿ ಮೋದಿ ಸೇರಿದಂತೆ, ಅನೇಕ ರಾಜಕೀಯ ಗಣ್ಯರು ಶಾಂತಿ ಕೋರಿದ್ದಾರೆ. ಭಾರತೀಯ ಚಿತ್ರರಂಗದ ಹಿರಿಯರಾದ ಅಮಿತಾಭ್, ರಜನಿಕಾಂತ್, ಕಮಲ್ ಹಾಸನ್, ಚಿರಂಜೀವಿ, ನಂದಮೂರಿ ಬಾಲಕೃಷ್ಣ, ಸಂಗೀತ ಕ್ಷೇತ್ರದ ದಿಗ್ಗಜರಾದ ಹಂಸಲೇಖ, ಇಳಯರಾಜ, ಎಆರ್ ರೆಹಮಾನ್, ಮಣಿಶರ್ಮ, ಎಂ ಎಂ ಕೀರವಾಣಿ, ಆಶಾ ಭೋಂಸ್ಲೆ, ರಾಜೇಶ್ ಕೃಷ್ಣನ್ ಮುಮನತಾದ ಗಣ್ಯರು ಅವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.
ಇಂದು ನಡೆಯುತ್ತಿರುವ ಎಸ್ ಪಿಬಿ ಅಂತ್ಯಕ್ರಿಯೆಗೆ ಚಿತ್ರರಂಗದ ಗಣ್ಯರು, ಕಲಾವಿದರು, ಸಂಗೀತ ನಿರ್ದೇಶಕರು, ಗಾಯಕರು ಅಂತಿಮ ನಮನ ಸಲ್ಲಿಸಿದರು. ಸರ್ಕಾರಿ ಸಕಲ ಗೌರವಗಳೊಂದಿಗೆ ಕುಶಾಲ ತೋಪುಗಳನ್ನು ಹಾರಿಸಲಾಯಿತು.
ನಂತರ ಆಂದ್ರ ಬ್ರಾಹ್ಮಣ ಸಂಪ್ರದಾಯ ದಂತೆ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment