ಉತ್ತರಪ್ರದೇಶ ಜೈಲಿನಲ್ಲೂ ಇನ್ನು ಮುಂದೆ ಗಾಯತ್ರಿ, ಮಹಾ ಮೃತ್ಯುಂಜಯ ಮಂತ್ರ

Team Newsnap
1 Min Read
Arrival of UP CM Yogi Aditya in Mandya: Road show for BJP ನಾಡಿದ್ದು ಮಂಡ್ಯಕ್ಕೆ ಯುಪಿ ಸಿಎಂ ಯೋಗಿ ಆದಿತ್ಯ‌ ಆಗಮನ : ಬಿಜೆಪಿ ಪರ ರೋಡ್‌ ಶೋ

ಉತ್ತರಪ್ರದೇಶದ ಎಲ್ಲಾ ಜೈಲುಗಳಲ್ಲಿ ಇನ್ನು ಮುಂದೆ ಗಾಯತ್ರಿ ಮಂತ್ರ ಮತ್ತು ಮಹಾ ಮೃತ್ಯುಂಜಯ ಮಂತ್ರಗಳು ಮೊಳಗಲಿವೆ.

ಜೈಲಿನಲ್ಲಿರುವ ಖೈದಿಗಳ ಮಾನಸಿಕ ಶಾಂತಿಗಾಗಿ ಈ ಮಂತ್ರಗಳನ್ನು ಮೊಳಗಿಸಲಾಗುತ್ತದೆ ಎಂದು ಉತ್ತರ ಪ್ರದೇಶ ಸರ್ಕಾರ ಸ್ಪಷ್ಟನೆ ನೀಡಿದೆ.

ಈಗಾಗಲೇ ರಾಜ್ಯ ಕಾರಾಗೃಹ ಸಚಿವ ಧರಂವೀರ್ ಪ್ರಜಾಪತಿ, ಕಾರಾಗೃಹ ಆಡಳಿತ ಮಂಡಳಿಗೆ ಈ ಮಂತ್ರಗಳನ್ನು ಮೊಳಗಿಸುವಂತೆ ಆದೇಶಿಸಿದ್ದಾರೆ.

ಧರಂವೀರ್ ಪ್ರಜಾಪತಿ ಅವರ ಸೂಚನೆ ಮೇರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗಾಯತ್ರಿ, ಮಹಾಮೃತ್ಯುಂಜಯ ಮಂತ್ರಗಳು ಕೇಳಿ ಬರುತ್ತಿವೆ.

ಈ ಮಂತ್ರಗಳ ಪಠಣ ಮಾಡುವುದರಿಂದ ಖೈದಿಗಳಿಗೆ ನೆಮ್ಮದಿ ಸಿಗುತ್ತದೆ. ಜೈಲಿನಿಂದ ಹೊರಬಂದು ಉತ್ತಮ ನಾಗರಿಕರಾಗುತ್ತಾರೆ. ಜೊತೆಗೆ ಅವರು ಆಧ್ಯಾತ್ಮಿಕತೆಯೊಂದಿಗೆ ಸಂಪರ್ಕ ಹೊಂದಿರುತ್ತಾರೆ ಎಂಬುದು ಸರ್ಕಾರದ ನಂಬಿಕೆ. ಆದ್ದರಿಂದ ಕಾರಾಗೃಹಗಳಲ್ಲಿ ಈ ಮಂತ್ರಗಳ ರಾಗಗಳನ್ನು ನುಡಿಸಲು ಸರ್ಕಾರ ನಿರ್ಧರಿಸಿದೆ.

Share This Article
Leave a comment