ಉತ್ತರಪ್ರದೇಶದ ಎಲ್ಲಾ ಜೈಲುಗಳಲ್ಲಿ ಇನ್ನು ಮುಂದೆ ಗಾಯತ್ರಿ ಮಂತ್ರ ಮತ್ತು ಮಹಾ ಮೃತ್ಯುಂಜಯ ಮಂತ್ರಗಳು ಮೊಳಗಲಿವೆ.
ಜೈಲಿನಲ್ಲಿರುವ ಖೈದಿಗಳ ಮಾನಸಿಕ ಶಾಂತಿಗಾಗಿ ಈ ಮಂತ್ರಗಳನ್ನು ಮೊಳಗಿಸಲಾಗುತ್ತದೆ ಎಂದು ಉತ್ತರ ಪ್ರದೇಶ ಸರ್ಕಾರ ಸ್ಪಷ್ಟನೆ ನೀಡಿದೆ.
ಈಗಾಗಲೇ ರಾಜ್ಯ ಕಾರಾಗೃಹ ಸಚಿವ ಧರಂವೀರ್ ಪ್ರಜಾಪತಿ, ಕಾರಾಗೃಹ ಆಡಳಿತ ಮಂಡಳಿಗೆ ಈ ಮಂತ್ರಗಳನ್ನು ಮೊಳಗಿಸುವಂತೆ ಆದೇಶಿಸಿದ್ದಾರೆ.
ಧರಂವೀರ್ ಪ್ರಜಾಪತಿ ಅವರ ಸೂಚನೆ ಮೇರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗಾಯತ್ರಿ, ಮಹಾಮೃತ್ಯುಂಜಯ ಮಂತ್ರಗಳು ಕೇಳಿ ಬರುತ್ತಿವೆ.
ಈ ಮಂತ್ರಗಳ ಪಠಣ ಮಾಡುವುದರಿಂದ ಖೈದಿಗಳಿಗೆ ನೆಮ್ಮದಿ ಸಿಗುತ್ತದೆ. ಜೈಲಿನಿಂದ ಹೊರಬಂದು ಉತ್ತಮ ನಾಗರಿಕರಾಗುತ್ತಾರೆ. ಜೊತೆಗೆ ಅವರು ಆಧ್ಯಾತ್ಮಿಕತೆಯೊಂದಿಗೆ ಸಂಪರ್ಕ ಹೊಂದಿರುತ್ತಾರೆ ಎಂಬುದು ಸರ್ಕಾರದ ನಂಬಿಕೆ. ಆದ್ದರಿಂದ ಕಾರಾಗೃಹಗಳಲ್ಲಿ ಈ ಮಂತ್ರಗಳ ರಾಗಗಳನ್ನು ನುಡಿಸಲು ಸರ್ಕಾರ ನಿರ್ಧರಿಸಿದೆ.
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
- ರೇವಣ್ಣ ರಿಲೀಸ್ : ಬಿಗ್ ರಿಲೀಪ್
- ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ
- ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್