ನ್ಯೂಸ್ ಸ್ನ್ಯಾಪ್
ಮುಂಬೈ
‘ಭಾರತದಲ್ಲಿ ಜೂನ್ ತಿಂಗಳ ಒಟ್ಟು ದೇಶಿಯ ಉತ್ಪನ್ನ 23.9 ರಷ್ಟು ಕುಸಿತ ಕಂಡಿರುವುದು ಬಹಳ ಆತಂಕಕಾರಿ ಬೆಳವಣಿಗೆ’ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ನ ಮಾಜಿ ಗವರ್ನರ್ ರಘುರಾಮ್ ರಾಜನ್ ಕಳವಳ ವ್ಯಕ್ತಪಡಿಸಿದರು.
ಇಂತಹ ಬಿಕ್ಕಟ್ಟನ್ನು ಪರಿಹರಿಸಲು ಸರ್ಕಾರ ಚಿಂತನಶೀಲ ಹಾಗೂ ಸಕ್ರಿಯ ಸರ್ಕಾರವಾಗಬೇಕಾದ ಅವಶ್ಯಕತೆ ಇದೆ ಎಂದೂ ಸಹ ಹೇಳಿದರು.
‘ಅತೀ ಹೆಚ್ಚು ಕರೋನಾ ಸೋಂಕು ಪ್ರಕರಣಗಳನ್ನು ಹೊಂದಿದ್ದ ಇಟಲಿ ಹಾಗೂ ಅಮೇರಿಕಗಳ ಜಿಡಿಪಿಯು ಕ್ರಮವಾಗಿ 12.4 ಹಾಗೂ 9.5 ರಷ್ಟು ಕುಸಿತ ಕಂಡಿದೆ. ಭಾರತದ ಪ್ರಮಾಣ 23.9 ರಷ್ಟಿದೆ. ಇದು ನಮ್ಮೆಲ್ಲರಿಗೂ ಎಚ್ಚರಿಕೆಯ ಗಂಟೆಯಾಗಬೇಕು ಎಂದು ರಘುರಾಮ್ ಅವರು ತಮ್ಮ ಲಿಂಕ್ ಡಿನ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
‘ಕರೋನಾವು ಭಾರತದಲ್ಲಿ ಇನ್ನೂ ಉಲ್ಬಣದ ಸ್ಥಿತಿಯಲ್ಲಿದೆ. ಹೀಗಾಗಿ ಜನರು ಅತಿಯಾದ ಖರ್ಚು-ವೆಚ್ಛಗಳಗೆ ಕಡಿವಾಣ ಹಾಕಲಿದ್ದಾರೆ. ಜನ ಸಂಪರ್ಕ ಹೆಚ್ಚಿರುವ ಹೋಟೆಲ್, ಸಿನಿಮಾ ಮುಂತಾದವುಗಳಿಗೆ ಸಂಬಂಧಿಸಿದಂತೆ ವ್ಯವಹಾರಗಳು ಇನ್ನೂ ಮಂದಗತಿಯಲ್ಲಿ ಸಾಗುವ ಸಂಭವವಿದೆ. ಅದಕ್ಕಾಗಿ ಮುಂದಿನ ಅಪಾಯ ಎದುರಿಸಲು ಸರ್ಕಾರ ತನ್ನ ಎಲ್ಲಾ ಸಂಪನ್ಮೂಲಗಳನ್ನು ವ್ಯಯಿಸದೆ, ಹೆಚ್ಚಿನ ಕ್ರಮಗಳನ್ನ ತೆಗೆದುಕೊಳ್ಳದೇ ಸುಮ್ಮನಿದೆ. ಈ ತಂತ್ರ ಸರ್ಕಾರಕ್ಕೆ ಹಾನಿ ಮಾಡಬಹುದು’ ಎಂದು ಅವರು ಬರೆದುಕೊಂಡಿದ್ದಾರೆ.
‘ಸರ್ಕಾರವು ಸೂಕ್ತ ಪರಿಹಾರ ಕ್ರಮಗಳನ್ನು ಹೊಂದದೇ ಇದ್ದರೆ ಆರ್ಥಿಕ ಬೆಳವಣಿಗೆಗೆ ಗಂಭೀರ ಹಾನಿಯಾಗುತ್ತದೆ’ ಎಂದೂ ಅವರು ಹೇಳಿದ್ದಾರೆ. ಸದ್ಯ ರಘುರಾಮ್ ರಾಜನ್ ಅವರು ಚಿಕ್ಯಾಗೋ ಯೂನಿವರ್ಸಿಟಿಯಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More
ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)… Read More
ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More
ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಷಾ ಬುಧವಾರ ಪಾಕ್ ಆಕ್ರಮಿತ ಕಾಶ್ಮೀರ (POK) ಮೇಲೆ ಭಾರತದ ಸಾರ್ವಭೌಮತ್ವವನ್ನು… Read More
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಹೊಂದಿದ ಪೆನ್ ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ… Read More
ನವದೆಹಲಿ ,ಮೇ 15 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,750 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment