ರಾಜ್ಯದ ನೂತನ ರಾಜ್ಯಪಾಲರಾಗಿ ನೇಮಕಗೊಂಡಿರುವ ತಾವರ್ ಚಂದ್ ಗೆಹ್ಲೋಟ್ ಭಾನುವಾರ ಬೆಳಿಗ್ಗೆ 10.30 ಕ್ಕೆ ಪ್ರಮಾಣವಚನ ಸ್ವೀಕರಿಸಿದರು.
ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಹೈಕೋರ್ಟ್ ಮುಖ್ಯ ನ್ಯಾ. ಎ. ಜಿ ಓಕಾ ನೂತನ ರಾಜ್ಯಪಾಲರಿಗೆ ಗೌಪ್ಯತೆ ಯ ಪ್ರಮಾಣವಚನ ಬೋಧಿಸಿದರು.
ಮುಖ್ಯ ಮಂತ್ರಿ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸ್ವೀಕರ್ ಕಾಗೇರಿ, ವಿಧಾನ ಪರಿಷತ್ ಸಭಾಪತಿ ಹೊರಟ್ಟಿ ಸೇರಿದಂತೆ, ಹಿರಿಯ ಅಧಿಕಾರಿಗಳು, ಅನೇಕ ಗಣ್ಯರು ಉಪಸ್ಥಿತರಿದ್ದರು.
ಮಧ್ಯಪ್ರದೇಶದ ಹಿರಿಯ ರಾಜಕಾರಣಿ ಗೆಹ್ಲೋಟ್, ಮೂರು ಬಾರಿ ಶಾಜಾಪುರ ಮೀಸಲು ಕ್ಷೇತ್ರದ ಶಾಸಕರಾಗಿದ್ದರು. ನಾಲ್ಕು ಬಾರಿ ಲೋಕಸಭಾ ಸಂಸದರಾಗಿ ಕಾರ್ಯ ನಿರ್ವಹಿಸಿದ್ದರು.
ಕೇಂದ್ರದಲ್ಲಿ ಸಾಮಾಜಿಕ ನ್ಯಾಯ & ಸಬಲೀಕರಣ ಸಚಿವರೂ ಆಗಿದ್ದ ಗೆಹ್ಲೋಟ್ ಈಗ ರಾಜ್ಯದ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ.
ಬಿಜೆಪಿ ಸಂಘಟನೆಯಲ್ಲಿ ಮತ್ತು ಸರ್ಕಾರದಲ್ಲಿ ಹಲವು ಜವಾಬ್ದಾರಿಗಳನ್ನು ನಿಭಾಯಿಸಿರುವ ಗೆಹಲೋತ್, 2013ರಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿಯೂ ಆಗಿಯೂ ಜವಾಬ್ದಾರಿ ನಿಭಾಯಿಸಿದ್ದಾರೆ. ಗೆಹ್ಲೋಟ್ ರವರಿಗೆ ರಾಜ್ಯದ ರಾಜಕಾರಣಿಗಳು, ಹಾಗೂ ಇಲ್ಲಿನ ವಿದ್ಯಾಮಾನಗಳ ಬಗ್ಗೆ ಚೆನ್ನಾಗಿ ತಿಳಿದಿದೆ.
ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More
ಐದು ದಿನಗಳ ಜೈಲು ವಾಸಕ್ಕೆ ಅಂತ್ಯ 5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More
ಬೆಂಗಳೂರು : ಪ್ರಜ್ವಲ್ ರೇವಣ್ಣ ವಿಚಾರದ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್ನಲ್ಲಿ ಸಂತ್ರಸ್ತೆ… Read More
ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More
ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More
ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More
This website uses cookies.
Leave a Comment