ಮದುವೆಗಳಿಗೆ ಇನ್ನು ಮುಂದೆ ಪಾಸ್ ಕಡ್ಡಾಯ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್ ಅಶೋಕ್ ಈಗಾಗಲೇ ಬುಕ್ ಆಗಿರುವ ಮದುವೆಗಳಿಗೆ ಪಾಸ್ ಬೇಕಿಲ್ಲ. ಆದರೆ ಇವತ್ತಿನಿಂದ ಬುಕ್ ಆಗುವ ಮದುವೆಗಳಿಗೆ ಪಾಸ್ ಕಡ್ಡಾಯ ಎಂದು ಹೇಳಿದರು.
ಕಲ್ಯಾಣ ಮಂಟಪಗಳಲ್ಲಿ 100 ಮಂದಿಗಷ್ಟೇ ಅವಕಾಶ ನೀಡಲಾಗುತ್ತದೆ. ನಿಗದಿತ ಸಂಖ್ಯೆಗಿಂತ ಹೆಚ್ಚು ಜನ ಸೇರಿದರೆ ಎಫ್ಐಆರ್ ದಾಖಲಿಸಲಾಗುತ್ತದೆ.
ಮದುವೆ ಪಾಸ್ ಗಳನ್ನು ಮದುವೆ ಆಯೋಜಕರೇ ವಿತರಣೆ ಮಾಡಬೇಕು. ಹೆಚ್ಚಿನ ಪಾಸ್ ಕೊಟ್ಟಿದ್ದರೆ ಕಲ್ಯಾಣ ಮಂಟಪ ಮಾಲೀಕರ ವಿರುದ್ಧ ಕೇಸ್ ದಾಖಲಿಸಲಾಗುತ್ತದೆ. ಅಲ್ಲದೆ ಮದುವೆ ಮಾಡುವ ಕುಟುಂಬಸ್ಥರ ವಿರುದ್ಧ ಎಫ್ಐಅರ್ ದಾಖಲು ಮಾಡಲಾಗುವುದು ಎಂದರು.
50 ಪಾಸ್ ಗಳನ್ನು ಅಲ್ಲಿನ ತಹಶೀಲ್ದಾರರು ನೀಡಿ ಮಾಡಿ ಆಯಾ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು.
ಮಂಟಪದ ಒಳಗೆ ಆದರೆ 100, ಹೊರಗಡೆ ಆದರೆ 200 ಜನ ಅಷ್ಟೆ ಇರಬೇಕು. ಸರ್ಕಾರ ನಿಗದಿ ಮಾಡಿರುವ ಪಾಸ್ ಅಷ್ಟೆ ಕೊಡೋದು. ಅದಕ್ಕಿಂತ ಹೆಚ್ಚಾದರೆ ನಾವು ಕಲ್ಯಾಣ ಮಂಟಪವನ್ನೇ ಮುಚ್ಚಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
- ಕರ್ನೂಲಿನಲ್ಲಿ ಭೀಕರ ರಸ್ತೆ ಅಪಘಾತ: ಮಂಡ್ಯದ ನಟಿ `ಪವಿತ್ರ ಜಯರಾಂ’ ಸಾವು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಪ್ರಜ್ವಲ್ ಪ್ರಕರಣ : ಸಿಬಿಐಗೆ ವಹಿಸಲ್ಲ – ಸಿಎಂ ಸಿದ್ದು
- ಕೊಡಗು: ಬಾಲಕಿಯನ್ನು ಭೀಕರ ಹತ್ಯೆಗೈದ ಆರೋಪಿ ಆತ್ಮಹತ್ಯೆ
- ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ