Main News

ಪಾಸ್ ಪೋರ್ಟ್ ಪಡೆಯುವುದು ಇನ್ನು ಸುಲಭ ವಿಧಾನ : ಡಿಜಿಲಾಕರ್ ಸೇವೆ ಆರಂಭ

ಕೇಂದ್ರ ವಿದೇಶಾಂಗ ಸಚಿವಾಲಯದ ಪಾಸ್ ಪೋಟ್೯ ಸೇವಾ ಕಾರ್ಯಕ್ರಮದ ಡಿಜಿಲಾಕರ್ ವೇದಿಕೆಯನ್ನು ಕೇಂದ್ರ ಸಚಿವ ವಿ. ಮುರಳಿಧರನ್ ಉದ್ಘಾಟಿಸಿದರು.

ನಾಗರಿಕ ಸೇವೆಗಳಿಗೆ ಅಗತ್ಯವಾದ ದಾಖಲೆಗಳನ್ನು ಕಾಗದ ರಹಿತವಾಗಿ ಸಲ್ಲಿಸಲು ಇದರಿಂದ ಅನುಕೂಲವಾಗಿದೆ.

ಪಾಸ್ ಪೋರ್ಟ್ ಸೇವೆಗಳ ವಿತರಣೆಯಲ್ಲಿ ಭಾರಿ ಪರಿವರ್ತನೆ ಆಗಿದೆ. ಕಳೆದ ಆರು ವರ್ಷದಲ್ಲಿ ಸಮಗ್ರ ಬದಲಾವಣೆಯಾಗಿದೆ. ಮಾಸಿಕ ಒಂದು ಮಿಲಿಯನ್ ಗೂ ಅಧಿಕ ಅರ್ಜಿಗಳು ಸಲ್ಲಿಕೆಯಾಗ್ತಿವೆ. ಪಾಸ್ ಪೋರ್ಟ್ ಸೇವಾ ಯೋಜನೆ ಮೂಲಕ 7 ಕೋಟಿಗೂ ಹೆಚ್ಚು ಪಾಸ್ ಪೋರ್ಟ್ ವಿತರಿಸಲಾಗಿದೆ. ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗಿದ್ದು, ಪಾಸ್ ಪೋರ್ಟ್ ನಿಯಮಗಳನ್ನು ಸರಳಿಕರಣಗೊಳಿಸಲಾಗಿದೆ ಎಂದರು.

ಮನೆ ಬಾಗಿಲಿಗೆ ಸೇವೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಮುಖ್ಯ ಅಂಚೆ ಕಚೇರಿಗಳಲ್ಲಿಯೂ ಪಾಸ್ ಪೋರ್ಟ್ ಸೇವಾ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದರು.

36 ಪಾಸ್ಪೋರ್ಟ್ ಕಚೇರಿಗಳು, 93 ಪಾಸ್ ಪೋರ್ಟ್ ಸೇವಾ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ನಾಗರಿಕ ಕೇಂದ್ರಿತ ವಿಧಾನಕ್ಕೆ ಒತ್ತು ನೀಡಲಾಗಿದೆ, ಕಾಗದರಹಿತ ಕ್ರಮ ಹೆಚ್ಚಿಸಿ ಡಿಜಿಲಾಕರ್ ಪ್ಲಾಟ್ ಫಾರ್ಮ್ ಗೆ ಬದಲಾಗಿದ್ದೇವೆ ಎಂದು ಸಚಿವರು ತಿಳಿಸಿದರು.

ಪಾಸ್ ಪೋರ್ಟ್ ಸೇವೆಗಳಿಗೆ ಅಗತ್ಯವಾದ ದಾಖಲೆಗಳನ್ನು ಪೇಪರ್ ಲೆಸ್ ಆಗಿ ಡಿಜಿಲಾಕರ್ ಮೂಲಕ ಸಲ್ಲಿಸಬಹುದಾಗಿದೆ. ಮೂಲ ದಾಖಲೆಗಳನ್ನು ಕೊಂಡೊಯ್ಯುವ ಅಗತ್ಯವಿಲ್ಲ. ಡಿಜಿಲಾಕರ್ ನಲ್ಲಿ ನೀಡಲಾದ ದಾಖಲೆಗಳನ್ನು ಮೂಲ ದಾಖಲೆಗಳ ರೀತಿಯಲ್ಲಿಯೇ ಪರಿಗಣಿಸಲಾಗುತ್ತದೆ.

ಭದ್ರತೆ ಹೆಚ್ಚಿಸಿ ವಿನ್ಯಾಸಗೊಳಿಸಲಾಗಿರುವ ಪಾಸ್ ಪೋರ್ಟ್ ಗಳನ್ನು ನೀಡಲು ಕ್ರಮಕೈಗೊಳ್ಳಲಾಗಿದೆ. ವಂಚನೆಗೆ ಆಸ್ಪದವಿಲ್ಲದಂತೆ ಪಾಸ್ ಪೋರ್ಟ್ ಗಳಲ್ಲಿ ದಾಖಲಾದ ಡೇಟಾವನ್ನು ಹಾಳುಮಾಡದಂತೆ ವಿನ್ಯಾಸಗೊಳಿಸಲಾಗುತ್ತದೆ. ಮುಂದಿನ ವರ್ಷಗಳಲ್ಲಿ ಬಯೋಮೆಟ್ರಿಕ್ ಪಾಸ್ ಪೋರ್ಟ್ ಗಳು ಸ್ವಯಂ ಚಾಲಿತ ಇ – ಪಾಸ್ ಪೋರ್ಟ್ ಗೇಟ್ ಗಳನ್ನು ವಿಮಾನ ನಿಲ್ದಾಣಗಳಲ್ಲಿ ಆರಂಭಿಸುವ ಚಿಂತನೆ ಇದೆ.

ನಾಗರಿಕರು ಪಾಸ್ ಪೋರ್ಟ್ ಸೇವೆಗಳಿಗಾಗಿ ದಾಖಲೆಗಳನ್ನು ತಮ್ಮೊಂದಿಗೆ ಕೊಂಡೊಯ್ಯಬೇಕಿಲ್ಲ. ಡಿಜಿಲಾಕರ್ ಸೌಲಭ್ಯ ಬಳಸಿಕೊಳ್ಳಬಹುದಾಗಿದೆ ಎಂದು ಸಚಿವರು ತಿಳಿಸಿದರು.

Team Newsnap
Leave a Comment
Share
Published by
Team Newsnap

Recent Posts

ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರ

ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More

September 19, 2024

ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಿರುಪತಿ ಲಡ್ಡನ್ನು ತಯಾರಿಸಲಾಗುತ್ತಿತ್ತು: ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More

September 19, 2024

ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲು

ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್‌ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲಾಗಿದೆ. ಶಾಸಕ… Read More

September 19, 2024

ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ಗೆ ವಿಶೇಷ ಚೇತನ ಬಲಿ

ಬೆಂಗಳೂರು: ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More

September 18, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More

September 18, 2024

ಸೆ.19ರಿಂದ ವಿಎಓ/ಜಿಟಿಟಿಸಿ ಪರೀಕ್ಷೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More

September 17, 2024