ಪೋಕ್ಸೋ ಪ್ರಕರಣದಿಂದ ಜೈಲು ಪಾಲಾಗಿರುವ ಮುರುಘಾ ಸ್ವಾಮೀಜಿ ಸ್ಥಾನಕ್ಕೆ ನೂತನ ಪೀಠಾಧಿಪತಿ ನೇಮಿಸುವಂತೆ ಮಠದ ವಿರೋಧಿ ಬಣ ಸಭೆ ನಡೆಸಿದೆ.
ಇದರ ಬೆನ್ನಲ್ಲೇ ಶೂನ್ಯ ಪೀಠ ಪರಂಪರೆಯ ಮುರುಘಾ ಮಠಕ್ಕೆ ಶೂದ್ರರನ್ನು ಪೀಠಾಧಿಪತಿಯಾಗಿ ನೇಮಿಸುವಂತೆ ಚಿತ್ರದುರ್ಗ ನಗರಸಭೆಯ ಮಾಜಿ ಅಧ್ಯಕ್ಷ ಬಿ.ಕಾಂತರಾಜ್ ಹೊಸ ಬಾಂಬ್ ಹಾಕಿದರು.ಇದನ್ನು ಓದಿ –ಭಾರತ್ ಜೋಡೋ ಯಾತ್ರೆ; ಸಂತ್ರಸ್ತರ ಜೊತೆಗೆ ಕಣ್ಣೀರಿಟ್ಟ ಡಿಕೆ ಶಿವಕುಮಾರ್ !
ಮುರುಘಾ ಶ್ರೀ ಬದಲಾವಣೆಗೆ ಸಭೆ ನಡೆಸಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಅವರು, ಶೂನ್ಯಪೀಠದ ಪರಂಪರೆಯ ಮಠದಲ್ಲಿ ಸರ್ವಧರ್ಮ, ಜಾತಿಗಳಿಗೂ ಸಮಾನ ಹಕ್ಕು ನೀಡಿರುವ ಪೀಠ ಇದಾಗಿದೆ. ಕೇವಲ ಒಂದು ಸಮುದಾಯಕ್ಕೆ ಮಠ ಸೀಮಿತವಾಗಿಲ್ಲ.
ಮುರುಘಾಶ್ರೀ ಬದಲಾವಣೆಗೆ ಕೇವಲ ಒಂದು ಕೋಮಿನವರಿಗೆ ಅಧಿಕಾರ ಕೊಟ್ಟವರು ಯಾರು? ಇದು ಬಸವತತ್ವದಡಿ ಬೆಳೆದು ನಿಂತಿರುವ ಪೀಠವಾಗಿದೆ ಎಂದರು.
ಶೂದ್ರರಾದ ಅಲ್ಲಮಪ್ರಭು ಈ ಪೀಠದ ಮೂಲ ಪೀಠಾಧ್ಯಕ್ಷರಾಗಿದ್ದರು. ಆದರೆ ಮುರುಘಾ ಸ್ವಾಮೀಜಿ ವಿರುದ್ಧ ಕೇಳಿಬಂದಿರುವ ಪೋಕ್ಸೋ ಆರೋಪದ ಬೆನ್ನಲ್ಲೇ ಶೂನ್ಯಪೀಠವನ್ನು ಒಂದು ವರ್ಗಕ್ಕೆ ಸೀಮಿತಗೊಳಿಸಿ ಸಭೆ ನಡೆಸಿದ್ದು ಸರಿಯಲ್ಲ. ಈ ಮುರುಘಾ ಮಠ ವೀರಶೈವ ಲಿಂಗಾಯತರ ಆಸ್ತಿಯಲ್ಲ.
ಶೂದ್ರರನ್ನು ಮಠದಲ್ಲಿ ಕಡೆಗಣಿಸಲಾಗುತ್ತಿದೆ ಎಂದು ಕಿಡಿಕಾರಿದರು.
ಮುರುಘಾ ಮಠಕ್ಕೆ ದಕ್ಕೆಯಾಗಲು ಚಿತ್ರದುರ್ಗದ ಜನತೆ ಬಿಡಲ್ಲ. ಮುರುಘಾಶ್ರೀ ಕಲ್ಯಾಣ ಸಮಿತಿ ಕಟ್ಟಿಕೊಂಡು ಮುರುಘಾ ಪರಂಪರೆ ಉಳಿಸಲು ಮುಂದಾಗುತ್ತೇವೆಂದು ಸಭೆ ನಡೆಸಿದ ವೀರಶೈವ ಲಿಂಗಾಯತ ಮುಖಂಡರಿಗೆ ಟಾಂಗ್ ನೀಡಿದರು.
- ಮತ್ತೆ ಟೋಲ್ ಶುಲ್ಕ ಹೆಚ್ಚಳ, ಏಪ್ರಿಲ್ 1 ರಿಂದಲೇ ಹೊಸ ದರ
- ಕೌಟುಂಬಿಕ ಕಲಹ : ಪತ್ನಿ ನೇಣುಬಿಗಿದುಕೊಂಡ ಬೆನ್ನಲ್ಲೇ ಪತಿಯೂ ಆತ್ಮಹತ್ಯೆ
- ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್ ಚುನಾವಣೆಯಿಂದ 6 ವರ್ಷ ಅನರ್ಹ
- ಸಂಸತ್ ಸದಸ್ಯತ್ವಕ್ಕೆ ಪ್ರಜ್ವಲ್ ರೇವಣ್ಣರಾಜೀನಾಮೆ ? ದೇವೇಗೌಡರಿಗೆ ತಲೆ ನೋವಾದ ಹಾಸನ ಟಿಕೆಟ್
- ಕೇಂದ್ರದಲ್ಲಿನ ವಿವಿಧ ಇಲಾಖೆಗಳಲ್ಲಿ 9.79 ಲಕ್ಷ ಖಾಲಿ ಹುದ್ದೆಗಳು
- SSLC ವಿದ್ಯಾರ್ಥಿಗಳಿಗೆ ಈ ಬಾರಿಯೂ ಶೇ.10 ರಷ್ಟು ಕೃಪಾಂಕ
More Stories
ಮತ್ತೆ ಟೋಲ್ ಶುಲ್ಕ ಹೆಚ್ಚಳ, ಏಪ್ರಿಲ್ 1 ರಿಂದಲೇ ಹೊಸ ದರ
ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್ ಚುನಾವಣೆಯಿಂದ 6 ವರ್ಷ ಅನರ್ಹ
ಸಂಸತ್ ಸದಸ್ಯತ್ವಕ್ಕೆ ಪ್ರಜ್ವಲ್ ರೇವಣ್ಣರಾಜೀನಾಮೆ ? ದೇವೇಗೌಡರಿಗೆ ತಲೆ ನೋವಾದ ಹಾಸನ ಟಿಕೆಟ್