ನಾಲೆಯಲ್ಲಿ ಏಡಿ ಹಿಡಿಯಲು ಹೋಗಿ ನೀರು ಪಾಲದ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಹಾರಂಗಿ ಜಲಾಶಯದ ನಾಲೆ ಬಳಿ ಬುಧವಾರ ನಡೆದಿದೆ. ಅನಿತ್ ನಾಲೆಗೆ ಬಿದ್ದು ಮೃತಪಟ್ಟ ದುರ್ದೈವಿ.
ಬೆಳಗ್ಗೆ 8:30ರ ಸುಮಾರಿಗೆ ಬ್ಯಾಡಗೂಟ್ಟದಲ್ಲಿರುವ ದಿಡ್ಡಳ್ಳಿ ನಿರಾಶ್ರಿತರ ಕೇಂದ್ರದ ಬಳಿಯಿಂದ ಸ್ನೇಹಿತರೊಂದಿಗೆ ಶಾಲೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಹಾರಂಗಿ ನಾಲೆಯಲ್ಲಿ ಏಡಿ ಕಾಣಿಸಿದೆ. ಅನಿತ್ ತನ್ನ ಗೆಳೆಯರಿಗೆ ಏಡಿ ಹಿಡಿದುಕೊಂಡು ಬರುವೆ ಎಂದು ನಾಲೆ ಸಮೀಪ ಹೋಗಿದ್ದಾನೆ.
ಆಕಸ್ಮಿಕವಾಗಿ ಕಾಲು ಜಾರಿ ನಾಲೆಯಲ್ಲಿ ಕೊಚ್ಚಿಕೊಂಡು ಹೋದ ಅನಿತ್ ಗಾಗಿ ಸ್ನೇಹಿತರು ಆತನನ್ನು ರಕ್ಷಣೆ ಮಾಡಲು ಮುಂದಾದರೂ ಯಾವುದೇ ಪ್ರಯೋಜನವಾಗಿಲ್ಲ,ನಂತರ ಶಾಲಾ ಬಾಲಕರು ಹಾಗೂ ಗ್ರಾಮಸ್ಥರು ನಾಲೆಯಲ್ಲಿ ಅನಿತ್ ಕಣ್ಮರೆಯಾಗಿರುವ ವಿಷಯ ತಿಳಿಸಿದ್ದಾರೆ.
ಅನಿತ್ನ ಹುಡುಕಾಟಕ್ಕಾಗಿ ಹಾರಂಗಿ ಜಲಾಶಯದಿಂದ ನಾಲೆಗೆ ಬಿಟ್ಟಿರುವ ನೀರನ್ನು ಸ್ಥಗಿತಗೊಳಿಸಿ, ಅಗ್ನಿ ಶಾಮಕ ದಳದವರು ಬಾಲಕನಿಗಾಗಿ ಶೋಧ ಕಾರ್ಯ ನಡೆಸಿ ಬಾಲಕನ ಮೃತದೇಹವನ್ನು ಹೊರತೆಗೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕುಶಾಲನಗರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೃತಪಟ್ಟ ಬಾಲಕ ಅನಿತ್ ಪ್ರತಿಭಾವಂತ ವಿದ್ಯಾರ್ಥಿ, ನೃತ್ಯ ತರಬೇತಿಯಲ್ಲೂ ಹೆಸರು ಮಾಡಿದ್ದ. ಚೀನಾದಲ್ಲಿ ನಡೆದ ನ್ಯಾಷನಲ್ ಲೆವೆಲ್ ಬುಕ್ ಆಫ್ ರೆಕಾರ್ಡ್ನಲ್ಲಿ ಭಾಗವಹಿಸಿದ್ದ.
ಸೆಪ್ಟೆಂಬರ್-ಅಕ್ಟೋಬರ್ನಲ್ಲಿ ಥೈಲೆಂಡ್ನಲ್ಲಿ ನಡೆಯಲಿರುವ ಇಂಟರ್ ನ್ಯಾಶನಲ್ ಬುಕ್ ಆಫ್ ರೆಕಾರ್ಡ್ ಭಾರತ ತಂಡದಿಂದ ಭಾಗವಹಿಸಲು ಸಿದ್ಧತೆ ನಡೆಸುತ್ತಿದ್ದ.
ನಮ್ಮ ಪೋಲಿಸರು ಸಮರ್ಥರಿದ್ದಾರೆ ಬಿಜೆಪಿಯವರು ಯಾವತ್ತಾದರೂ ಸಿಬಿಐ ತನಿಖೆ ಕೊಟ್ಟಿದ್ದಾರಾ ? ಬೆಂಗಳೂರು : ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐಗೆ… Read More
ಮಡಿಕೇರಿ : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್ಎಸ್ಎಲ್ಸಿ ಬಾಲಕಿಯನ್ನು ಭೀಕರವಾಗಿ ಹತ್ಯೆ ಮಾಡಿ ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ… Read More
ಮುಂಬೈ: ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರವನ್ನು ಶುದ್ಧೀಕರಿಸುತ್ತೇವೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ… Read More
ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೂನ್ 1 ರ ವರೆಗೂ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು… Read More
ಬೆಂಗಳೂರು:ಪೆನ್ಡ್ರೈವ್ ಪ್ರಕರಣ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು… Read More
ಪುಣೆ : ವಿಚಾರವಾದಿ ಡಾ. ನರೇಂದ್ರ ದಾಭೋಲ್ಕರ್ ಅವರನ್ನು ಹತ್ಯೆಗೈದಿದ್ದ ಇಬ್ಬರಿಗೆ ಪುಣೆಯ ವಿಶೇಷ ಯುಎಪಿಎ ನ್ಯಾಯಾಲಯ ಜೀವಾವಧಿ ಶಿಕ್ಷೆ… Read More
This website uses cookies.
Leave a Comment