ಸಮುದ್ರದ ಅಲೆಗಳ ಮಧ್ಯೆ ಕಲ್ಲುಬಂಡೆಯ ಮೇಲೆ ಧ್ಯಾನದಲ್ಲಿ ಕುಳಿತಂತೆ ಫೋಟೊಗೆ ಪೋಸ್ ಕೊಡಲು ಹೋಗಿ ಪ್ರವಾಸಿಗನೊಬ್ಬ ಸಮುದ್ರ ಪಾಲಾಗಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕುಮಟಾದ ವನ್ನಳ್ಳಿ ಕಡಲ ತೀರದಲ್ಲಿ ದುರಂತ ನಡೆದಿದೆ.
ಶಿರಸಿಯ ನಿವಾಸಿ 42 ವರ್ಷದ ಸುಬ್ಬುಗೌಡ ಮೃತ ಪ್ರವಾಸಿಗ.
ಸ್ನೇಹಿತರ ಜೊತೆ ಪ್ರವಾಸಕ್ಕೆ ಬಂದಿದ್ದ ಸುಬ್ಬುಗೌಡ, ಕಡಲ ತೀರದ ಬಂಡೆ ಮೇಲೆ ಕುಳಿತು ಫೋಟೋಗೆ ಪೋಸ್ ಕೊಡುತ್ತಿದ್ದರು. ಈ ವೇಳೆ ರಭಸವಾಗಿ ಬಂದ ಅಲೆಯಲ್ಲಿ ಕೊಚ್ಚಿ ಹೋಗಿದ್ದಾರೆ.
ಮಳೆ ಹೆಚ್ಚಾಗುತ್ತಿರುವುದರಿಂದ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದೆ. ಬೃಹತ್ ಗಾತ್ರದ ಅಲೆಗಳು ಕಡಲಿಗೆ ಅಪ್ಪಳಿಸುತ್ತಿವೆ. ಇದಾವುದನ್ನೂ ಅರಿಯದ ಪ್ರವಾಸಿಗರು, ಸಮುದ್ರದ ತಟದಲ್ಲಿ ಫೋಟೋಗೆ ಪೋಸ್ ಕೊಡಲು ಮುಂದಾಗುತ್ತಾರೆ. ಅದೇ ರೀತಿ ಪೋಸ್ ಕೊಡಲು ಹೋಗಿ ವ್ಯಕ್ತಿ ಇದೀಗ ಸಮುದ್ರದ ಪಾಲಾಗಿದ್ದಾರೆ.
ಘಟನೆ ಸಂಬಂಧ ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ