Trending

ಗೋದ್ರಾ ಹತ್ಯಾಕಾಂಡ ಪ್ರಕರಣಕ್ಕೆಹೊಸ ತಿರುವು: ​ ಸಾಮಾಜಿಕ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಬಂಧನ

ಗುಜರಾತ್ ನ ಗೋದ್ರಾ ಹತ್ಯಾಕಾಂಡ ಹಾಗೂ ಗಲಭೆ ಪ್ರಕರಣದಿಂದ ಪ್ರಧಾನಿ ನರೇಂದ್ರ ಮೋದಿಗೆ ಸುಪ್ರೀಂ ಕೋರ್ಟ್‌ ಕ್ಲೀನ್ ಚಿಟ್ ನೀಡಿದ್ದ ಆದೇಶವನ್ನು ಎತ್ತಿಹಿಡಿದ ಬೆನ್ನಲ್ಲೇ ಗೃಹ ಸಚಿವ ಅಮಿತ್ ಶಾ ಅವರು ತೀಸ್ತಾ ಸೆಟಲ್ವಾಡ್ ಅವರ ಎನ್‌ಜಿಒ ವಿರುದ್ಧ ವಾಗ್ದಾಳಿ ಮಾಡಿದ ಕೆಲವೇ ಗಂಟೆಗಳಲ್ಲಿ ಸಾಮಾಜಿಕ ಹೋರಾಟಗಾರ್ತಿ, ಎನ್ ಜಿ ಒ ಮುಖ್ಯಸ್ಥೆ ತೀಸ್ತಾ ಸೆಟಲ್ವಾಡಾ ಬಂಧನವಾಗಿದೆ.

ತೀಸ್ತಾ ಸೆಟಲ್ವಾಡ್ ಬಂಧನವಾಗಿದ್ದೇಕೆ ಅಂತಾ ಹೇಳೋಕು ಮುನ್ನ ಗೃಹ ಸಚಿವ ಅಮಿತ್ ಶಾ ಆಕೆಯ ಕುರಿತು ಮಾತನಾಡಿದರು

ಕೇಂದ್ರ ಗೃಹ ಸಚಿವ ಅಮಿತ್‌ ಹೇಳಿದಿಷ್ಟು . 2002ರಲ್ಲಿ ನಡೆದಿದ್ದ ಗಲಭೆ ರಾಜಕಾರಣಿಗಳು, ಪತ್ರಕರ್ತರು ಮತ್ತು ಎನ್‌ಜಿಓ ಈ ಮೂರು ಕೂಟಗಳು ಸೇರಿ ಮಾಡಿದ್ದ ಕುತಂತ್ರ. ಅಲ್ಲದೇ ಎನ್‌ಜಿಒ ಮೋದಿ ವಿರುದ್ಧ ಮಾಡಿದ್ದ ಸುಳ್ಳು ಆರೋಪ ಅಂತಾ ಕಿಡಿಕಾರಿದರು. ಕೆಲವೇ ಗಂಟೆಗಳಲ್ಲಿ ತಿಸ್ತಾ ಸೆಟಲ್ವಾಡರ ಬಂಧನವಾಗಿದೆ. ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿ ಹಿರಿಯ ಸಾಧಕರಿಗೆ ಘೋಷಣೆ

2002ರ ಗುಜರಾತ್ ಗಲಭೆಯಲ್ಲಿ ಸಂತ್ರಸ್ತರ ಪರ ಎನ್‌ಜಿಒ ಕಾರ್ಯನಿರ್ವಹಿಸಿತ್ತು. ಸಂತ್ರಸ್ತರಿಗೆ ನ್ಯಾಯ ಒದಗಿಸಲೆಂದೇ ತೀಸ್ತಾ ಸೆಟಲ್ವಾಡ್, ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್ ಹೆಸರಲ್ಲಿ ಎನ್‌ಜಿಒ ಸ್ಥಾಪನೆ ಮಾಡಿ, ಈ ಎನ್‌ಜಿಒ ಕೋರ್ಟ್‌ಗಳಲ್ಲಿ ವಕಲಾತ್ತು ವಹಿಸಲೆಂದು ಹುಟ್ಟುಹಾಕಿದ ಸಂಸ್ಥೆಯಾಗಿತ್ತು. ಆದರೆ ಈ ಸಂಸ್ಥೆಯು ಮೋದಿ ವಿರುದ್ಧ ಸುಳ್ಳು ಮಾಹಿತಿ ನೀಡಿದ್ದಾಗಿ ಆರೋಪ ಕೇಳಿಬಂದಿದೆ. ಹೀಗಾಗಿ ಮುಂಬೈನಲ್ಲಿ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಬಂಧಿಸಲಾಗಿದೆ ಎನ್ನಲಾಗಿದೆ. ಇನ್ನೂ ಗುಜರಾತ್‌ನ ಭಯೋತ್ಪಾದನಾ ನಿಗ್ರಹ ದಳ ಪೊಲೀಸರು ತೀಸ್ತಾರನ್ನು ಬಂಧಿಸಿ ಕರೆದೊಯ್ದಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ರೇವಣ್ಣ ಕೇಂದ್ರ ಕಾರಾಗೃಹಕ್ಕೆ ಶಿಪ್ಟ್ : 4567 ಖೈದಿ ಸಂಖ್ಯೆ ನೀಡಿಕೆ

ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್​ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More

May 8, 2024

SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು

ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್‌ಕಲ್ ಮಲ್ಲಾಪೂರು… Read More

May 8, 2024

ನಾಳೆ ( May 9 ) SSLC ಫಲಿತಾಂಶ ಪ್ರಕಟ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ರಾಜ್ಯದ ಎರಡೂ ಹಂತದ ಮತದಾನದ ವಿವರ : ಮಂಡ್ಯ ಪ್ರಥಮ – ಬೆಂಗಳೂರು ದಕ್ಷಿಣ ಕೊನೆ

ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More

May 8, 2024

ಹೆಚ್‌.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್‌ ಆಸ್ಪತ್ರೆಗೆ ಶಿಫ್ಟ್‌!

ಹೆಚ್‌.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್‌ ಟೆಸ್ಟ್ ಮಾಡಿಸಿದ್ದ ಎಸ್‌ಐಟಿ ಅಧಿಕಾರಿಗಳು ಎದೆ ಉರಿ… Read More

May 7, 2024