ನಾಳೆ ಇಡಿ ವಿಚಾರಣೆಗೆ ಹೋಗವುದಿಲ್ಲ ಎಂದು ಬೆಳಿಗ್ಗೆ ಹೇಳಿದ್ದ ಡಿಕೆ ಬ್ರದರ್ಸ್ ಈಗ ಉಲ್ಟಾ ಹೊಡೆದಿದ್ದಾರೆ.
ನ್ಯಾಷನಲ್ ಹೆರಾಲ್ಡ್ ( National Herald )ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಜಾರಿ ನಿರ್ದೇಶನಾಲಯದ ಎದುರು ವಿಚಾರಣೆಗೆ ಹಾಜರಾಗುವುದಾಗಿ ಕೆಪಿಸಿಸಿ ( KPCC ) ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.ಇದನ್ನು ಓದಿ –ಸೀರಿಯಲ್ ನಟಿ ದಿವ್ಯಾ ಶ್ರೀಧರ್ ಗೆ ವಂಚನೆ ಪಾಪಿ ಪತಿಯ ಬಗ್ಗೆ ದೂರಿನ ವಿಡಿಯೋ
ಇಂದೇ ದೆಹಲಿಗೆ ಡಿಕೆ ಸಹೋದರರಾದ ಡಿ.ಕೆ.ಶಿವಕುಮಾರ್ ( D K Shivkumar ) ಹಾಗೂ ಸಂಸದ ಡಿ.ಕೆ.ಸುರೇಶ್ ( D K Suresh ) ತೆರಳಲಿದ್ದಾರೆ.
ಮಂಡ್ಯದಲ್ಲಿ ಭಾರತ್ ಜೋಡೋ ಪಾದಯಾತ್ರೆಯಲ್ಲಿ ಡಿ.ಕೆ.ಶಿವಕುಮಾರ್ ಪಾಲ್ಗೊಂಡಿದ್ದರು. ನಂತರ ಖರಡ್ಯ ಗ್ರಾಮದಲ್ಲಿ ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು, ವಿಚಾರಣೆಗೆ ಹಾಜರಾಗಲು ನಾನು ಮತ್ತು ಡಿ.ಕೆ.ಸುರೇಶ್ ಸಮಯಾವಕಾಶ ಕೇಳಿದ್ದೆವು.
ಭಾರತ್ ಜೋಡೋ ಯಾತ್ರೆ ( Bharat Jodo Yatra ) ಮುಗಿದ ಮೇಲೆ ಬರುತ್ತೇವೆ ಎಂದು ಕಾಲಾವಕಾಶ ಕೊಡಿ ಅಂತಾ ಕೇಳಿದ್ದೆವು. ಇವತ್ತು ಇಡಿಯವರು ಮತ್ತೊಂದು ನೋಟಿಸ್ ಕೊಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ನಾವು ನಿಮಗೆ ಆದೇಶ ಕೊಡುತ್ತಿದ್ದೇವೆ. ಹೀಗಾಗಿ ನಾಳೆ 10:30ಕ್ಕೆ ಇಡಿ ( ED ) ವಿಚಾರಣೆಗೆ ಹಾಜರಾಗುವಂತೆ 2ನೇ ನೋಟಿಸ್ ಕೊಟ್ಟಿದ್ದಾರೆ. ಈ ಬಗ್ಗೆ ಪಕ್ಷದ ಹಿರಿಯರ ಜೊತೆ ಚರ್ಚಿಸಿದ್ದೇವೆ.
ನಾವು ನಮ್ಮ ಪಕ್ಷ ಕಾನೂನಿಗೆ ಗೌರವ ಕೊಡುವವರು. ಕಾನೂನಿಗೆ ಅಗೌರವ ತೋರುವುದು ಸರಿಯಲ್ಲ. ಹೀಗಾಗಿ ನೋಟಿಸ್ಗೆ ಗೌರವ ಕೊಟ್ಟು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ